25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಅರುವ ಯಕ್ಷಗಾನ ತರಬೇತಿ ಕೇಂದ್ರ ಅಳದಂಗಡಿ

ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ವತಿಯಿಂದ ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ನಲ್ಲಿ
ಜು.27 ರಂದು ಅರುವ ಯಕ್ಷಗಾನ ತರಬೇತಿ ಪ್ರಾರಂಭವಾಯಿತು.

ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯರು ಹಾಗೂ ಸಮಾಜ ಸೇವಾ ಮನೋಭಾವನೆಯ ಎ.ಶಶಿಧರ ಶೆಟ್ಟಿ ಅರುವ ಇವರು ದೀಪ ಪ್ರಜ್ವಲಿಸುವ ಮೂಲಕ ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿ ಕಲಿಯಲು ಇಂತಹ ಯಕ್ಷಗಾನ ತರಬೇತಿ ಕೇಂದ್ರ ಹೆಚ್ಚಿನ ಕೆಲಸ ಮಾಡಲಿ
ಅರುವ ಎಂದಾಕ್ಷಣ ಎರಡು ಯಕ್ಷಗಾನ ಕಲಾವಿದರ ಹೆಸರು ನೆನಪಿಗೆ ಬರುತ್ತದೆ ಅರುವ ಕೊರಗಪ್ಪ ಶೆಟ್ಟಿ ಮತ್ತು ಅರುವ ನಾರಾಯಣ ಶೆಟ್ಟಿ ಇವರನ್ನು ನೆನಪಿಸಲೇ ಬೇಕಾಗುತ್ತದೆ. ಆದುದರಿಂದ ಆಮಂತ್ರಣ ಪ್ರತಿಷ್ಠಾನ ಮಾಡುವ ಈ ಯಕ್ಷಗಾನ ತರಬೇತಿ ಕೇಂದ್ರಕ್ಕೆ ಅವಶ್ಯವಾಗಿ ವಿದ್ಯಾರ್ಥಿಗಳು ಸೇರ್ಪಡೆ ಗೊಳ್ಳಲಿ ಎಂದು ಹಾರೈಸಿದರು.

ಈ ಸಂಧರ್ಭದಲ್ಲಿ ಯಕ್ಷಗಾನ ತರಬೇತಿ ಗುರುಗಳಾದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು
ಇವರಿಗೆ ಗುರುಕಾಣಿಕೆ ಸಲ್ಲಿಸಿದ ವಿದ್ಯಾರ್ಥಿಗಳು .
ನಾಟಕ ಕಲಾವಿದ ಹಾಗೂ ಐಸಿರಿ ಆರ್ಟ್ಸ್ ಅರುವ ಇದರ ಮಾಲಕರಾದ ದರ್ಶನ್ ಶೆಟ್ಟಿ, ಪ್ರಪುಲ್ಲ ಟೆಕ್ಸ್ ಟೈಲ್ಸ್ ಮಾಲಕ ಪ್ರದೀಪ್ ಕುಮಾರ್, ಮಹಮ್ಮಾಯೀ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿಯ ದಯಾಕರ ರೈ , ಭಾಜಪ ಕಾರ್ಯಕರ್ತ ಸದಾಶಿವ ಕರಂಬಾರು, ರಾಜೇಂದ್ರ ದೇವಾಡಿಗ ಆನೆಮಹಲ್,ಶ್ರೀ.ಧ.ಮಂ.ಶಾಲೆ ಧರ್ಮಸ್ಥಳ ಇಲ್ಲಿಯ ಶಿಕ್ಷಕಿ ರಾಜೇಶ್ವರಿ, ಮಹಾಗಣಪತಿ ಹಾರ್ಡ್ ವೇರ್ ಮಾಲಕ ಚಂದ್ರಶೇಖರ್ ಅರುವ, ಹರೀಶ್ ಕುಲಾಲ್ ನಾವರ, ಅಶ್ವಿನಿ ಪಿಲ್ಯ, ನಮಿತಾ ಅಳದಂಗಡಿ, ಪವಿತ್ರ ಅಳದಂಗಡಿ, ಜ್ಯೋತಿ ಸುಲ್ಕೇರಿ, ಮುಂತಾದವರು ಉಪಸ್ಥಿತರಿದ್ದರು.

ಆಮಂತ್ರಣ ಸೇವಾ ಪ್ರತಿಷ್ಠಾನದ ಅಧ್ಯಕ್ಷ ವಿಜಯ ಕುಮಾರ್ ಸ್ವಾಗತಿಸಿದರು, ಟ್ರಸ್ಟಿ ಅರುಣ್ ಅರುವ ಧನ್ಯವಾದ ಸಲ್ಲಿಸಿ
ಸರ್ವರ ಸಹಕಾರ ಯಾಚಿಸಿದರು.

Related posts

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!