September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

ಬೆಳ್ತಂಗಡಿ: ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಬೆಳವಣಿಗೆಯ ಸಮಸ್ಯೆಗಳನ್ನು ಪತ್ತೆಹಚ್ಚಿ ಅದಕ್ಕೆ ಸೂಕ್ತ ಥೆರಪಿ ಹಾಗೂ ಕೌನ್ಸಿಲಿಂಗ್ ಸೇವೆ ನೀಡುವ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯ ಸುವರ್ಣ ಆರ್ಕೇಡ್ ಮೊದಲ ಮಹಡಿಯಲ್ಲಿ ಜು. 27ರಂದು ಪ್ರಾರಂಭಗೊಂಡಿದೆ.

ಬೆಳ್ತಂಗಡಿ ತಾಲೂಕಿನ ಹಿರಿಯ ವೈದ್ಯರಾದ ಡಾ.ಶ್ರೀನಿವಾಸ್ ಡೋಂಗ್ರೆ ನೂತನ ಕಲರವ ಸಂಟರನ್ನು ಉದ್ಘಾಟಿಸಿ ಶುಭ ಕೋರಿದರು.ಕಲರವ ಪೌಂಢೇಶನ್ ಸ್ಥಾಪಕರಾದ ಡಾ.ಶಿಲ್ಪಾ ಹೆಗ್ಡೆ ಮಾತನಾಡಿ ಮಕ್ಕಳಿಗೆ ಸಮಗ್ರವಾದ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕಳೆದ ಏಳು ವರ್ಷಗಳ ಹಿಂದೆ ಕಲರವ ಸೆಂಟರನ್ನು ಪ್ರಾರಂಭಿಸಲಾಗಿದೆ.

ಮಕ್ಕಳಲ್ಲಿ ಅಡಕಗೊಂಡಿರುವ ಎಲ್ಲಾ ರೀತಿಯ ಬೆಳವಣಿಗೆಯ ಸಮಸ್ಯೆಗಳನ್ನು ಪತ್ತೆಹಚ್ಚಿ ಅದಕ್ಕೆ ಸೂಕ್ತ ಥೆರಪಿ ಹಾಗೂ ಕೌನ್ಸಿಲಿಂಗ್ ಮೂಲಕ ಸೂಕ್ತ ಚಿಕಿತ್ಸೆ ನೀಡಿ ಮಕ್ಕಳಿಗೆ ಅರಿವು ಮತ್ತು ಬೆಂಬಲವನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದರು.ವಾರದ ಎಲ್ಲಾ ದಿನವೂ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಕಲರವ ಸೆಂಟರ್ ತೆರೆದಿರುತ್ತದೆ. ಕಲರಸ ಸೆಂಟರ್ ಮಂಗಳೂರು,ಉಡುಪಿ, ಬೆಳ್ತಂಗಡಿಯಲ್ಲಿ ಕಾರ್ಯಚರಿಸುತ್ತದೆ.

ಬೆಳ್ತಂಗಡಿಯ ಪ್ರಸಿದ್ಧ ಎಲುಬು ತಜ್ಞ ಡಾ.ಶಶಿಕಾಂತ್ ಡೋಂಗ್ರೆ,ಗಜಾನನ ಹೆಗ್ಡೆ ಹುಬ್ಬಳ್ಳಿ, ಜಯಲಕ್ಷ್ಮಿ ಹೆಗ್ಡೆ ಹುಬ್ಬಳ್ಳಿ, ಡಾ.ಶಶಿಧರ ಡೋಂಗ್ರೆ,ಡಾ.ಸುಷ್ಮಾ ಡೋಂಗ್ರೆ, ಡಾ.ರಂಜನ್ ಕುಮಾರ್‌,ನರೇಂದ್ರ ತುಳಪುಳೆ,ಯಶವಂತ ಪಟವರ್ಧನ್,ಪ್ರಕಾಶ್ ಅಭ್ಯಾಂಕರ್,ಕಾಜುಮುಗೇರು ಸಂತೋಷ್ ಹೆಬ್ಬಾರ್,ಸಚಿನ್ ಭಿಡೆ ಮುಂಡಾಜೆ,ಮನೋಜ್ ಲೋಂಡೆ ಮುಂಡಾಜೆ,ಇನ್ನಿತರರು ಉಪಸ್ಥಿತರಿದ್ದರು.

ಅಳದಂಗಡಿಯ ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳಪುಳೆ-ಶ್ರೀಮತಿ ಗೀತಾ ತುಳಪುಳೆ, ಇ.ಎನ್.ಟಿ ಸ್ಪೆಷಲಿಸ್ಟ್ ಡಾ.ಹರ್ಷ ತುಳಪುಳೆ ಅವರು ಆಗಮಿಸಿದ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-2025–26ನೇ ಸಾಲಿನಲ್ಲಿ ರೂ.1.37 ಕೋಟಿಗೂ ಅಧಿಕ ಲಾಭ, ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ಘೋಷಣೆ

Suddi Udaya
error: Content is protected !!