25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

ಬೆಳ್ತಂಗಡಿ: ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಬೆಳವಣಿಗೆಯ ಸಮಸ್ಯೆಗಳನ್ನು ಪತ್ತೆಹಚ್ಚಿ ಅದಕ್ಕೆ ಸೂಕ್ತ ಥೆರಪಿ ಹಾಗೂ ಕೌನ್ಸಿಲಿಂಗ್ ಸೇವೆ ನೀಡುವ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯ ಸುವರ್ಣ ಆರ್ಕೇಡ್ ಮೊದಲ ಮಹಡಿಯಲ್ಲಿ ಜು. 27ರಂದು ಪ್ರಾರಂಭಗೊಂಡಿದೆ.

ಬೆಳ್ತಂಗಡಿ ತಾಲೂಕಿನ ಹಿರಿಯ ವೈದ್ಯರಾದ ಡಾ.ಶ್ರೀನಿವಾಸ್ ಡೋಂಗ್ರೆ ನೂತನ ಕಲರವ ಸಂಟರನ್ನು ಉದ್ಘಾಟಿಸಿ ಶುಭ ಕೋರಿದರು.ಕಲರವ ಪೌಂಢೇಶನ್ ಸ್ಥಾಪಕರಾದ ಡಾ.ಶಿಲ್ಪಾ ಹೆಗ್ಡೆ ಮಾತನಾಡಿ ಮಕ್ಕಳಿಗೆ ಸಮಗ್ರವಾದ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕಳೆದ ಏಳು ವರ್ಷಗಳ ಹಿಂದೆ ಕಲರವ ಸೆಂಟರನ್ನು ಪ್ರಾರಂಭಿಸಲಾಗಿದೆ.

ಮಕ್ಕಳಲ್ಲಿ ಅಡಕಗೊಂಡಿರುವ ಎಲ್ಲಾ ರೀತಿಯ ಬೆಳವಣಿಗೆಯ ಸಮಸ್ಯೆಗಳನ್ನು ಪತ್ತೆಹಚ್ಚಿ ಅದಕ್ಕೆ ಸೂಕ್ತ ಥೆರಪಿ ಹಾಗೂ ಕೌನ್ಸಿಲಿಂಗ್ ಮೂಲಕ ಸೂಕ್ತ ಚಿಕಿತ್ಸೆ ನೀಡಿ ಮಕ್ಕಳಿಗೆ ಅರಿವು ಮತ್ತು ಬೆಂಬಲವನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದರು.ವಾರದ ಎಲ್ಲಾ ದಿನವೂ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಕಲರವ ಸೆಂಟರ್ ತೆರೆದಿರುತ್ತದೆ. ಕಲರಸ ಸೆಂಟರ್ ಮಂಗಳೂರು,ಉಡುಪಿ, ಬೆಳ್ತಂಗಡಿಯಲ್ಲಿ ಕಾರ್ಯಚರಿಸುತ್ತದೆ.

ಬೆಳ್ತಂಗಡಿಯ ಪ್ರಸಿದ್ಧ ಎಲುಬು ತಜ್ಞ ಡಾ.ಶಶಿಕಾಂತ್ ಡೋಂಗ್ರೆ,ಗಜಾನನ ಹೆಗ್ಡೆ ಹುಬ್ಬಳ್ಳಿ, ಜಯಲಕ್ಷ್ಮಿ ಹೆಗ್ಡೆ ಹುಬ್ಬಳ್ಳಿ, ಡಾ.ಶಶಿಧರ ಡೋಂಗ್ರೆ,ಡಾ.ಸುಷ್ಮಾ ಡೋಂಗ್ರೆ, ಡಾ.ರಂಜನ್ ಕುಮಾರ್‌,ನರೇಂದ್ರ ತುಳಪುಳೆ,ಯಶವಂತ ಪಟವರ್ಧನ್,ಪ್ರಕಾಶ್ ಅಭ್ಯಾಂಕರ್,ಕಾಜುಮುಗೇರು ಸಂತೋಷ್ ಹೆಬ್ಬಾರ್,ಸಚಿನ್ ಭಿಡೆ ಮುಂಡಾಜೆ,ಮನೋಜ್ ಲೋಂಡೆ ಮುಂಡಾಜೆ,ಇನ್ನಿತರರು ಉಪಸ್ಥಿತರಿದ್ದರು.

ಅಳದಂಗಡಿಯ ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳಪುಳೆ-ಶ್ರೀಮತಿ ಗೀತಾ ತುಳಪುಳೆ, ಇ.ಎನ್.ಟಿ ಸ್ಪೆಷಲಿಸ್ಟ್ ಡಾ.ಹರ್ಷ ತುಳಪುಳೆ ಅವರು ಆಗಮಿಸಿದ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!