23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಅರುವ ಯಕ್ಷಗಾನ ತರಬೇತಿ ಕೇಂದ್ರ ಅಳದಂಗಡಿ

ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ವತಿಯಿಂದ ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ನಲ್ಲಿ
ಜು.27 ರಂದು ಅರುವ ಯಕ್ಷಗಾನ ತರಬೇತಿ ಪ್ರಾರಂಭವಾಯಿತು.

ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯರು ಹಾಗೂ ಸಮಾಜ ಸೇವಾ ಮನೋಭಾವನೆಯ ಎ.ಶಶಿಧರ ಶೆಟ್ಟಿ ಅರುವ ಇವರು ದೀಪ ಪ್ರಜ್ವಲಿಸುವ ಮೂಲಕ ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿ ಕಲಿಯಲು ಇಂತಹ ಯಕ್ಷಗಾನ ತರಬೇತಿ ಕೇಂದ್ರ ಹೆಚ್ಚಿನ ಕೆಲಸ ಮಾಡಲಿ
ಅರುವ ಎಂದಾಕ್ಷಣ ಎರಡು ಯಕ್ಷಗಾನ ಕಲಾವಿದರ ಹೆಸರು ನೆನಪಿಗೆ ಬರುತ್ತದೆ ಅರುವ ಕೊರಗಪ್ಪ ಶೆಟ್ಟಿ ಮತ್ತು ಅರುವ ನಾರಾಯಣ ಶೆಟ್ಟಿ ಇವರನ್ನು ನೆನಪಿಸಲೇ ಬೇಕಾಗುತ್ತದೆ. ಆದುದರಿಂದ ಆಮಂತ್ರಣ ಪ್ರತಿಷ್ಠಾನ ಮಾಡುವ ಈ ಯಕ್ಷಗಾನ ತರಬೇತಿ ಕೇಂದ್ರಕ್ಕೆ ಅವಶ್ಯವಾಗಿ ವಿದ್ಯಾರ್ಥಿಗಳು ಸೇರ್ಪಡೆ ಗೊಳ್ಳಲಿ ಎಂದು ಹಾರೈಸಿದರು.

ಈ ಸಂಧರ್ಭದಲ್ಲಿ ಯಕ್ಷಗಾನ ತರಬೇತಿ ಗುರುಗಳಾದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು
ಇವರಿಗೆ ಗುರುಕಾಣಿಕೆ ಸಲ್ಲಿಸಿದ ವಿದ್ಯಾರ್ಥಿಗಳು .
ನಾಟಕ ಕಲಾವಿದ ಹಾಗೂ ಐಸಿರಿ ಆರ್ಟ್ಸ್ ಅರುವ ಇದರ ಮಾಲಕರಾದ ದರ್ಶನ್ ಶೆಟ್ಟಿ, ಪ್ರಪುಲ್ಲ ಟೆಕ್ಸ್ ಟೈಲ್ಸ್ ಮಾಲಕ ಪ್ರದೀಪ್ ಕುಮಾರ್, ಮಹಮ್ಮಾಯೀ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿಯ ದಯಾಕರ ರೈ , ಭಾಜಪ ಕಾರ್ಯಕರ್ತ ಸದಾಶಿವ ಕರಂಬಾರು, ರಾಜೇಂದ್ರ ದೇವಾಡಿಗ ಆನೆಮಹಲ್,ಶ್ರೀ.ಧ.ಮಂ.ಶಾಲೆ ಧರ್ಮಸ್ಥಳ ಇಲ್ಲಿಯ ಶಿಕ್ಷಕಿ ರಾಜೇಶ್ವರಿ, ಮಹಾಗಣಪತಿ ಹಾರ್ಡ್ ವೇರ್ ಮಾಲಕ ಚಂದ್ರಶೇಖರ್ ಅರುವ, ಹರೀಶ್ ಕುಲಾಲ್ ನಾವರ, ಅಶ್ವಿನಿ ಪಿಲ್ಯ, ನಮಿತಾ ಅಳದಂಗಡಿ, ಪವಿತ್ರ ಅಳದಂಗಡಿ, ಜ್ಯೋತಿ ಸುಲ್ಕೇರಿ, ಮುಂತಾದವರು ಉಪಸ್ಥಿತರಿದ್ದರು.

ಆಮಂತ್ರಣ ಸೇವಾ ಪ್ರತಿಷ್ಠಾನದ ಅಧ್ಯಕ್ಷ ವಿಜಯ ಕುಮಾರ್ ಸ್ವಾಗತಿಸಿದರು, ಟ್ರಸ್ಟಿ ಅರುಣ್ ಅರುವ ಧನ್ಯವಾದ ಸಲ್ಲಿಸಿ
ಸರ್ವರ ಸಹಕಾರ ಯಾಚಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya
error: Content is protected !!