September 6, 2026
ಅಪರಾಧ ಸುದ್ದಿ

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥರ ಎದುರು ಹಾಜರಾಗಿ ವಿಚಾರಣೆ ಮುಂದುವರೆದಿದೆ.


ನಿನ್ನೆ (ಜು.26ರಂದು) ಎಸ್. ಐ. ಟಿ ಅಧಿಕಾರಿ ಡಿಐಜಿ ಎಂ.ಎನ್‌. ಅನುಚೇತ್ ಮುಂದೆ ಹಾಜರಾಗಿದ್ದು ನಿರಂತರ ಎಂಟು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ನೀಡಿದ್ದಾರೆ. ತನ್ನಲ್ಲಿರುವ ಪಿನ್ ಟು ಪಿನ್ ಮಾಹಿತಿಯನ್ನು ಎಸ್. ಐ. ಟಿ ಮುಂದೆ ನೀಡಿರುವ ಮುಸುಕುಧಾರಿ ಸಾಕ್ಷಿ ದೂರುದಾರ ಹೇಳಿಕೆ ನೀಡಿದ ನಂತರ ತನ್ನ ವಕೀಲರೊಂದಿಗೆ ನಿಗೂಢ ಸ್ಥಳಕ್ಕೆ ತೆರಳಿದ್ದರು. ಇಂದು ಮೊಹಾಂತಿಯವರು ಮಂಗಳೂರಿಗೆ ಭೇಟಿ ನೀಡಲಿದ್ದು,
ಸಾಕ್ಷಿ ದೂರುದಾರನ ಹೇಳಿಕೆ ಕುರಿತಾದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Related posts

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಆರೋಪಿ ಪುದುವೆಟ್ಟುವಿನ ಯುವಕನ ಬಂಧನ

Suddi Udaya

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Suddi Udaya
error: Content is protected !!