July 23, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಜು. 27ರಂದು ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ಲಯನ್ ಮುರಳಿ ಬಲಿಪ ವಹಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಶ್ರೀ ಮಂಜುನಾಥ ನಾಯ್ಕ ಇವರನ್ನು ಗೌರವಿಸಲಾಯಿತು. ಬೆಳ್ತಂಗಡಿ ಲಯನ್ಸ್ ಕ್ಲಬ್ ಸೇವಾ ಆಂದೋಲನದಲ್ಲಿ ಸಕ್ರಿಯರಾಗಿರುವ ನಿವೃತ್ತ ಸೈನಿಕರುಗಳಾದ ಲಯನ್ ಗೋಪಾಲಕೃಷ್ಣ ಕಾಂಚೋಡು, ಲಯನ್ ಎನ್.ಪಿ. ತಂಗಚ್ಚನ್, ಲಯನ್ ಮೋಹನ್ ಕೆ. ಎಚ್ ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಎಕ್ಸೆಲ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಡಾ| ನವೀನ್ ಕುಮಾರ್ ಮರಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಸರ್ವರನ್ನು ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಲಯನ್ ವಸಂತ ಶೆಟ್ಟಿ ಶ್ರದ್ಧಾ ನಿರ್ವಹಿಸಿದರು. ಪೂರ್ವಾಧ್ಯಕ್ಷ ಲಯನ್ ನಿತ್ಯಾನಂದ ನಾವರ ವಂದಿಸಿದರು. ಲಯನ್ ಸದಸ್ಯರುಗಳಾದ ರಾಮಕೃಷ್ಣ ಗೌಡ, ಉಮೇಶ ಶೆಟ್ಟಿ, ಸುಶೀಲ ಎಸ್. ಹೆಗ್ಡೆ, ಸುರೇಶ ಶೆಟ್ಟಿ ಲ್ಯಾಲ, ದತ್ತಾಶ್ರಯ ಗೊಲ್ಲ, ಅನಂತಕೃಷ್ಣ, ಪಂಚಾಕ್ಷರಪ್ಪ, ಪ್ರವೀಣ್ ಹೆಚ್.ಎಸ್., ರಮೇಶ್, ಹನುಮಂತರಾಯ, ಹೇಮಲತಾ ಲಿಯೋ ಆಧ್ಯಕ್ಷೆ ಡಾ| ಭಾಷಿಣೆ, ಲಿಯೋ ಕಾರ್ಯದರ್ಶಿ ದೀಕ್ಷಿತ್ ಲಯನ್ಸ್ ಹಾಗೂ ಲಿಯೋ ಸದಸ್ಯರು ಸಹಕರಿಸಿದರು. ಎಕ್ಸೆಲ್ ಪಿ.ಯು.ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು

Related posts

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಟಾಪ್ 10 ರಲ್ಲಿ ಜೆ ಸಿ ಐ ಬೆಳ್ತಂಗಡಿ ಮಂಜಶ್ರೀ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
error: Content is protected !!