25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

ಬೆಳ್ತಂಗಡಿ:ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ,ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ದಿ. ಪದ್ಮನಾಭ ಮಾಣಿಂಜ ಇವರ ತೆರವುಗೊಂಡಿರುವ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜು‌ 27 ರಂದು ಚುನಾವಣೆ ನಡೆಯಿತು.

ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿ,ಸೊಸೈಟಿಯ ಉಪಾಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಭಗೀರಥ ಜಿ ರವರು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಲಯನ್ಸ್ ಕ್ಲಬ್ ನಲ್ಲಿ ವಿಶೇಷ ಸಾಧನೆ ಮಾಡಿ,ಯುವವಾಹನಿ ಸಂಘಟನೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಜಗದೀಶ್ಚಂದ್ರ ಡಿ.ಕೆ ರವರು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣೆ ಪ್ರಕ್ರಿಯೆಯನ್ನು ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿಯಾದ ಬಿ.ವಿ.ಪ್ರತಿಮಾರವರು ನಡೆಸಿಕೊಟ್ಟಿರುತ್ತಾರೆ.

ಈ‌ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ತನುಜಾ ಶೇಖರ್,ಚಂದ್ರಶೇಖರ್,ಸಂಜೀವ ಪೂಜಾರಿ,ಕೆ.ಪಿ ದಿವಾಕರ, ಧರ್ಣಪ್ಪ ಪೂಜಾರಿ,ಧರಣೇಂದ್ರ ಕುಮಾರ್,ಜಯವಿಕ್ರಮ್ ಪಿ,ಆನಂದ ಪೂಜಾರಿ,ಡಾ‌.ರಾಜಾರಾಮ ಕೆ.ಬಿ,ಗಂಗಾಧರ ಮಿತ್ತಮಾರ್,ರಕ್ಷಿತ್ ಶಿವರಾಮ್,ಚಿದಾನಂದ ಪೂಜಾರಿ,ಸೂರಜ್ ಕುಮಾರ್,ವಿಶೇಷಾಧಿಕಾರಿ ಮೋನಪ್ಪ ಪೂಜಾರಿ,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya
error: Content is protected !!