ಶಿಶಿಲ : ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಜು. 27ರಂದು ಬೀಸಿದ ಬಾರಿ ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆಯಾಗಿತ್ತು. ಕೂಡಲೇ ಸ್ಥಳಕ್ಕೆ ತೆರಳಿದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಅವಿನಾಶ್ ಭಿಡೆ, ಕಿರಣ್ ಹಾಗೂ ಇತರರು ಸೇರಿ ಮರ ಹಾಗೂ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಘಟನಾ ಸ್ಥಳಕ್ಕೆ ಗ್ರಾ. ಪಂ. ಅಧ್ಯಕ್ಷ ಸುಧೀನ್ ಭೇಟಿ ನೀಡಿದರು.







