25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಜು 27 ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರ ಭಾಗ್ಯದಿಂದ ರಾಜ್ಯವು ದಿವಾಳಿಯತ್ತ ಸಾಗುತ್ತಿರುವುದರಿಂದ ಅಭಿವೃದ್ಧಿ ಮರೀಚಿಕೆಯಾಗಿದ್ದು,ರಸ್ತೆ ನಿರ್ಮಾಣ ಮಾತ್ರವಲ್ಲದೆ ಕನಿಷ್ಠ ರಸ್ತೆ ನಿರ್ವಹಣೆಗೆ ಕೂಡ ಅನುದಾನ ನೀಡದೆ ಇರುವುದರಿಂದ ನಾಗರೀಕರಿಗೆ ಸಂಚಾರಕ್ಕೆ ಯಾವುದೇ ತೊಂದರೆಯಾಗಬಾರದೆಂದು ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದ


ಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜರವರು ಭಾಗಿಯಾಗಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೇಸರ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾಲಾಡಿ ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ, ಪಂಚಾಯತ್ ಸದಸ್ಯರುಗಳಾದ ಶ್ರೀ ದಿನೇಶ್ ಕರ್ಕೇರ ಮತ್ತು ಶ್ರೀ ರಾಜೇಶ ಕೊಡ್ಯೇಲು, ಮಾಲಾಡಿ ಪಂಚಾಯತ್ ಸದಸ್ಯೆ- ಮಂಡಲ ಬಿಜೆಪಿ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್, ಸೋಣಂದೂರು ಬಿಜೆಪಿ ಬೂತ್ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಮಡಂತ್ಯಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಶ್ರೀ ಸುರೇಶ್ ಮತ್ತು ಶ್ರೀಮತಿ ಧನಲಕ್ಷ್ಮಿ ಚಂದ್ರಶೇಖರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya
error: Content is protected !!