ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

ಬೆಳ್ತಂಗಡಿ:ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ,ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ದಿ. ಪದ್ಮನಾಭ ಮಾಣಿಂಜ ಇವರ ತೆರವುಗೊಂಡಿರುವ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜು‌ 27 ರಂದು ಚುನಾವಣೆ ನಡೆಯಿತು.

ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿ,ಸೊಸೈಟಿಯ ಉಪಾಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಭಗೀರಥ ಜಿ ರವರು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಲಯನ್ಸ್ ಕ್ಲಬ್ ನಲ್ಲಿ ವಿಶೇಷ ಸಾಧನೆ ಮಾಡಿ,ಯುವವಾಹನಿ ಸಂಘಟನೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಜಗದೀಶ್ಚಂದ್ರ ಡಿ.ಕೆ ರವರು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣೆ ಪ್ರಕ್ರಿಯೆಯನ್ನು ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿಯಾದ ಬಿ.ವಿ.ಪ್ರತಿಮಾರವರು ನಡೆಸಿಕೊಟ್ಟಿರುತ್ತಾರೆ.

ಈ‌ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ತನುಜಾ ಶೇಖರ್,ಚಂದ್ರಶೇಖರ್,ಸಂಜೀವ ಪೂಜಾರಿ,ಕೆ.ಪಿ ದಿವಾಕರ, ಧರ್ಣಪ್ಪ ಪೂಜಾರಿ,ಧರಣೇಂದ್ರ ಕುಮಾರ್,ಜಯವಿಕ್ರಮ್ ಪಿ,ಆನಂದ ಪೂಜಾರಿ,ಡಾ‌.ರಾಜಾರಾಮ ಕೆ.ಬಿ,ಗಂಗಾಧರ ಮಿತ್ತಮಾರ್,ರಕ್ಷಿತ್ ಶಿವರಾಮ್,ಚಿದಾನಂದ ಪೂಜಾರಿ,ಸೂರಜ್ ಕುಮಾರ್,ವಿಶೇಷಾಧಿಕಾರಿ ಮೋನಪ್ಪ ಪೂಜಾರಿ,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!