25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

ಬೆಳ್ತಂಗಡಿ:ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ,ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ದಿ. ಪದ್ಮನಾಭ ಮಾಣಿಂಜ ಇವರ ತೆರವುಗೊಂಡಿರುವ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜು‌ 27 ರಂದು ಚುನಾವಣೆ ನಡೆಯಿತು.

ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿ,ಸೊಸೈಟಿಯ ಉಪಾಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಭಗೀರಥ ಜಿ ರವರು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಲಯನ್ಸ್ ಕ್ಲಬ್ ನಲ್ಲಿ ವಿಶೇಷ ಸಾಧನೆ ಮಾಡಿ,ಯುವವಾಹನಿ ಸಂಘಟನೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಜಗದೀಶ್ಚಂದ್ರ ಡಿ.ಕೆ ರವರು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣೆ ಪ್ರಕ್ರಿಯೆಯನ್ನು ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿಯಾದ ಬಿ.ವಿ.ಪ್ರತಿಮಾರವರು ನಡೆಸಿಕೊಟ್ಟಿರುತ್ತಾರೆ.

ಈ‌ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ತನುಜಾ ಶೇಖರ್,ಚಂದ್ರಶೇಖರ್,ಸಂಜೀವ ಪೂಜಾರಿ,ಕೆ.ಪಿ ದಿವಾಕರ, ಧರ್ಣಪ್ಪ ಪೂಜಾರಿ,ಧರಣೇಂದ್ರ ಕುಮಾರ್,ಜಯವಿಕ್ರಮ್ ಪಿ,ಆನಂದ ಪೂಜಾರಿ,ಡಾ‌.ರಾಜಾರಾಮ ಕೆ.ಬಿ,ಗಂಗಾಧರ ಮಿತ್ತಮಾರ್,ರಕ್ಷಿತ್ ಶಿವರಾಮ್,ಚಿದಾನಂದ ಪೂಜಾರಿ,ಸೂರಜ್ ಕುಮಾರ್,ವಿಶೇಷಾಧಿಕಾರಿ ಮೋನಪ್ಪ ಪೂಜಾರಿ,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya
error: Content is protected !!