July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

ಬೆಳ್ತಂಗಡಿ:ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ,ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ದಿ. ಪದ್ಮನಾಭ ಮಾಣಿಂಜ ಇವರ ತೆರವುಗೊಂಡಿರುವ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜು‌ 27 ರಂದು ಚುನಾವಣೆ ನಡೆಯಿತು.

ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿ,ಸೊಸೈಟಿಯ ಉಪಾಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಭಗೀರಥ ಜಿ ರವರು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಲಯನ್ಸ್ ಕ್ಲಬ್ ನಲ್ಲಿ ವಿಶೇಷ ಸಾಧನೆ ಮಾಡಿ,ಯುವವಾಹನಿ ಸಂಘಟನೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಜಗದೀಶ್ಚಂದ್ರ ಡಿ.ಕೆ ರವರು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣೆ ಪ್ರಕ್ರಿಯೆಯನ್ನು ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿಯಾದ ಬಿ.ವಿ.ಪ್ರತಿಮಾರವರು ನಡೆಸಿಕೊಟ್ಟಿರುತ್ತಾರೆ.

ಈ‌ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ತನುಜಾ ಶೇಖರ್,ಚಂದ್ರಶೇಖರ್,ಸಂಜೀವ ಪೂಜಾರಿ,ಕೆ.ಪಿ ದಿವಾಕರ, ಧರ್ಣಪ್ಪ ಪೂಜಾರಿ,ಧರಣೇಂದ್ರ ಕುಮಾರ್,ಜಯವಿಕ್ರಮ್ ಪಿ,ಆನಂದ ಪೂಜಾರಿ,ಡಾ‌.ರಾಜಾರಾಮ ಕೆ.ಬಿ,ಗಂಗಾಧರ ಮಿತ್ತಮಾರ್,ರಕ್ಷಿತ್ ಶಿವರಾಮ್,ಚಿದಾನಂದ ಪೂಜಾರಿ,ಸೂರಜ್ ಕುಮಾರ್,ವಿಶೇಷಾಧಿಕಾರಿ ಮೋನಪ್ಪ ಪೂಜಾರಿ,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya
error: Content is protected !!