32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

ಬೆಳ್ತಂಗಡಿ: ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಬೆಳವಣಿಗೆಯ ಸಮಸ್ಯೆಗಳನ್ನು ಪತ್ತೆಹಚ್ಚಿ ಅದಕ್ಕೆ ಸೂಕ್ತ ಥೆರಪಿ ಹಾಗೂ ಕೌನ್ಸಿಲಿಂಗ್ ಸೇವೆ ನೀಡುವ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯ ಸುವರ್ಣ ಆರ್ಕೇಡ್ ಮೊದಲ ಮಹಡಿಯಲ್ಲಿ ಜು. 27ರಂದು ಪ್ರಾರಂಭಗೊಂಡಿದೆ.

ಬೆಳ್ತಂಗಡಿ ತಾಲೂಕಿನ ಹಿರಿಯ ವೈದ್ಯರಾದ ಡಾ.ಶ್ರೀನಿವಾಸ್ ಡೋಂಗ್ರೆ ನೂತನ ಕಲರವ ಸಂಟರನ್ನು ಉದ್ಘಾಟಿಸಿ ಶುಭ ಕೋರಿದರು.ಕಲರವ ಪೌಂಢೇಶನ್ ಸ್ಥಾಪಕರಾದ ಡಾ.ಶಿಲ್ಪಾ ಹೆಗ್ಡೆ ಮಾತನಾಡಿ ಮಕ್ಕಳಿಗೆ ಸಮಗ್ರವಾದ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕಳೆದ ಏಳು ವರ್ಷಗಳ ಹಿಂದೆ ಕಲರವ ಸೆಂಟರನ್ನು ಪ್ರಾರಂಭಿಸಲಾಗಿದೆ.

ಮಕ್ಕಳಲ್ಲಿ ಅಡಕಗೊಂಡಿರುವ ಎಲ್ಲಾ ರೀತಿಯ ಬೆಳವಣಿಗೆಯ ಸಮಸ್ಯೆಗಳನ್ನು ಪತ್ತೆಹಚ್ಚಿ ಅದಕ್ಕೆ ಸೂಕ್ತ ಥೆರಪಿ ಹಾಗೂ ಕೌನ್ಸಿಲಿಂಗ್ ಮೂಲಕ ಸೂಕ್ತ ಚಿಕಿತ್ಸೆ ನೀಡಿ ಮಕ್ಕಳಿಗೆ ಅರಿವು ಮತ್ತು ಬೆಂಬಲವನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದರು.ವಾರದ ಎಲ್ಲಾ ದಿನವೂ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಕಲರವ ಸೆಂಟರ್ ತೆರೆದಿರುತ್ತದೆ. ಕಲರಸ ಸೆಂಟರ್ ಮಂಗಳೂರು,ಉಡುಪಿ, ಬೆಳ್ತಂಗಡಿಯಲ್ಲಿ ಕಾರ್ಯಚರಿಸುತ್ತದೆ.

ಬೆಳ್ತಂಗಡಿಯ ಪ್ರಸಿದ್ಧ ಎಲುಬು ತಜ್ಞ ಡಾ.ಶಶಿಕಾಂತ್ ಡೋಂಗ್ರೆ,ಗಜಾನನ ಹೆಗ್ಡೆ ಹುಬ್ಬಳ್ಳಿ, ಜಯಲಕ್ಷ್ಮಿ ಹೆಗ್ಡೆ ಹುಬ್ಬಳ್ಳಿ, ಡಾ.ಶಶಿಧರ ಡೋಂಗ್ರೆ,ಡಾ.ಸುಷ್ಮಾ ಡೋಂಗ್ರೆ, ಡಾ.ರಂಜನ್ ಕುಮಾರ್‌,ನರೇಂದ್ರ ತುಳಪುಳೆ,ಯಶವಂತ ಪಟವರ್ಧನ್,ಪ್ರಕಾಶ್ ಅಭ್ಯಾಂಕರ್,ಕಾಜುಮುಗೇರು ಸಂತೋಷ್ ಹೆಬ್ಬಾರ್,ಸಚಿನ್ ಭಿಡೆ ಮುಂಡಾಜೆ,ಮನೋಜ್ ಲೋಂಡೆ ಮುಂಡಾಜೆ,ಇನ್ನಿತರರು ಉಪಸ್ಥಿತರಿದ್ದರು.

ಅಳದಂಗಡಿಯ ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳಪುಳೆ-ಶ್ರೀಮತಿ ಗೀತಾ ತುಳಪುಳೆ, ಇ.ಎನ್.ಟಿ ಸ್ಪೆಷಲಿಸ್ಟ್ ಡಾ.ಹರ್ಷ ತುಳಪುಳೆ ಅವರು ಆಗಮಿಸಿದ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!