September 6, 2026
ಶಾಲಾ ಕಾಲೇಜು

ಸರಸ್ವತಿ ಆಂಗ್ಲ ಮಾಧ್ಯಮಶಾಲೆ ಮುಂಡಾಜೆಯಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ.


ಮುಂಡಾಜೆ :ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆ ಗಳಲ್ಲಿ ಒಂದಾದ ಸರಸ್ವತಿ ಆಂಗ್ಲ ಮಾಧ್ಯಮ ದಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವನ್ನು ಜು. 27ರಂದು ಹಮ್ಮಿಕೊಳ್ಳಲಾಯಿತು.

ವಿವೇಕಾನಂದವಿದ್ಯಾವರ್ಧಕ ಸಂಘದ ಅಧ್ಯಕ್ಷರು ಆಗಿರುವ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಸಭೆಯ ಅಧ್ಯಕ್ಷರಾಗಿದ್ದು ಸಭೆಯನ್ನು ಉದ್ಧೇಶಿಸಿ ಮಾತನಾಡಿದರು. ಪೋಷಕರೊಂದಿಗೆ ಮಾತನಾಡಿ ಮಕ್ಕಳಿಗೆ ವಿದ್ಯಾಭ್ಯಾಸ ದ ಜೊತೆಗೆ ಸಂಸ್ಕಾರ ಕೂಡ ಬಹಳ ಮುಖ್ಯ ಎಂದರು. ಕಳೆದ ಶೈಕ್ಷಣಿಕ ಸಾಲಿ ನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಯಾದ ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಪುರ ಸ್ಕರಿಸಲಾಯಿತು. ವೇದಿಕೆಯಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಶ್ರೀ ವಿನಯ ಚಂದ್ರ ಶ್ರೀಮಾನ್, ಮುಖ್ಯ ಮಾತಾಜಿ ಶ್ರೀಮತಿ ಚಂದ್ರಮತಿ, ಹಿರಿಯ ಮಾತಾಜಿ ಶ್ರೀಮತಿ ಶ್ರೀಜಾ ಉಪಸ್ಥಿತರಿದ್ದರು. ಮುಖ್ಯ ಮಾತಾಜಿ ಸ್ವಾಗತಿಸಿದರು. ನಿರ್ಮಿತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾವತಿ ಮಾತಾಜಿಯ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.

Related posts

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

Suddi Udaya

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಂದ ಯಶೋವನ ಭೇಟಿ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!