September 6, 2026
ಗ್ರಾಮಾಂತರ ಸುದ್ದಿ

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ.) ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ CPR (Cardio Pulmonary Resuscitation) ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮವು ಜು. 27ರಂದು ಸೈಂಟ್ ಸಬಾಸ್ಟಿಯನ್ ಚರ್ಚ್ ನಲ್ಲಿ ನಡೆಸಲಾಯಿತು.


ಸಂಘದ ಅಧ್ಯಕ್ಷರಾದ ಅಗಸ್ಟೀನ್ ಟಿ.ಎ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ರೆ. ಫಾ. ಸುನಿಲ್ ಪೂವತಿಂಗಲ್ ಆಗಮಿಸಿದ್ದರು.
ತರಬೇತಿಯನ್ನು ನೀಡಲು ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ನರ್ಸಿಂಗ್ ಸೂಪರಿಟೆಂಡೆಂಟ್ ಶ್ರೀಮತಿ ಶೆರ್ಲಿ ಮತ್ತು ಅವರ ವೈದ್ಯಕೀಯ ತಂಡ ಹಾಜರಿದ್ದರು. ಅವರು ಜನರಿಗೆ CPR ತಂತ್ರಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ, ಪ್ರಾಯೋಗಿಕವಾಗಿ ತರಬೇತಿಯನ್ನು ನೀಡಿದರು.
ಸಂಘದ ಕಾರ್ಯದರ್ಶಿ ಶಿಜೋ ಜೋಸೆಫ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಉಪಾಧ್ಯಕ್ಷರಾದ ಮ್ಯಾಥ್ಯೂ ವಿ ಟಿ, ಕೋಶಾಧಿಕಾರಿ ರಂಜಿತ್ ಪಿ ಎಸ್, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿ ಮಾಹಿತಿ ಮತ್ತು ತರಬೇತಿಯನ್ನು ಪಡೆದುಕೊಂಡರು.
ಈ ಕಾರ್ಯಕ್ರಮ ಜನಜಾಗೃತಿ ಮೂಡಿಸಲು ಮತ್ತು ತುರ್ತು ಪರಿಸ್ಥಿತಿಯಲ್ಲಿ ಜೀವ ಉಳಿಸಲು ಅತ್ಯಂತ ಪರಿಣಾಮಕಾರಿಯಾಗಿ ನೆರವಾಯಿತು.

Related posts

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!