32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

ಕೊರಿಂಜ :ಕೊರಿಂಜ ಉರುವಾಲು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮವು ಶ್ರೀ ಕ್ಷೇತ್ರದ ಸಹ ಆಡಳಿತ ಮೋಕ್ತೇಸರ ಸೇಸಪ್ಪ ರೈ ಕೊರಿಂಜ ಇವರು ಉದ್ಘಾಟಿಸಿ ಮಾತನಾಡಿ ದೇವಸ್ಥಾನದಲ್ಲಿ ಕುಣಿತ ಭಜನಾ ಉದ್ಘಾಟನೆ ಆಗಿರುವುದರಿಂದ ಒಳ್ಳೆಯ ಪೂರಕ ವಾತಾವರಣ ನಿರ್ಮಾಣವಾಗಿದೆ. ಭಜನೆಯಿಂದ ವಿಭಜನೆ ಇಲ್ಲ ಎಂಬ‌ ನುಡಿಯಂತೆ ಪ್ರತಿಯೊಬ್ಬರು ಕೂಡ ನಮ್ಮ ಧರ್ಮವನ್ನು ಉಳಿಸಲು ಭಜನೆಯಿಂದ ಸಾಧ್ಯವಿದೆ ಎಂದರು.

ಕುಣಿತ ಭಜನಾ ತರಬೇತಿಯ ಗುರುಗಳಾದ ನಾಗೇಶ ಬಿ‌ ನೆರಿಯ ಪ್ರಾಸ್ತಾವಿಕವಾಗಿ ಮಾತನಾಡಿ ಇಂದಿನ ಯುಗದಲ್ಲಿ ಭಜನೆಯಿಂದ ನಮ್ಮ ಸಂಸ್ಕೃತಿ, ಸಂಸ್ಕಾರ ಮತ್ತು ಧರ್ಮ ಇವುಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿದೆ. ತಾವೆಲ್ಲರೂ ಪ್ರತಿದಿನ ಮನೆಗಳಲ್ಲಿ ಭಜನೆಯನ್ನು ಮಾಡಬೇಕೆಂದು ತಿಳಿಸಿದರು.

ವೇದಿಕೆಯಲ್ಲಿ ಭಜನಾ ತರಬೇತುದಾರರಾದ ಅಭಿಷೇಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ ಶೆಟ್ಟಿ ಉಪಸ್ಥಿತರಿದ್ದರು.

ಚಿಣ್ಣರ‌ ಬಳಗ ಭಜನಾ ತಂಡದ ಸದಸ್ಯರಾದ ಜ್ಞಾನೇಶ್ ಆಳ್ವ ಕೊರಿಂಜ ಪ್ರಾರ್ಥಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉರುವಾಲು ವಿಭಾಗದ ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ ನಿರೂಪಿಸಿ ಹಾಗೂ ವಂದಿಸಿದರು. ಈ‌ ಸಂದರ್ಭದಲ್ಲಿ ಸತ್ಯನಾರಾಯಣ ಭಜನಾ ಮಂಡಳಿ ಸದಸ್ಯ ಗಣೇಶ ಗೌಡ ಬನಾರಿ‌ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಸದಸ್ಯ ಪ್ರದೀಪ್ ನಾಯ್ಕ ಸಹಕರಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!