25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

ಕೊರಿಂಜ :ಕೊರಿಂಜ ಉರುವಾಲು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮವು ಶ್ರೀ ಕ್ಷೇತ್ರದ ಸಹ ಆಡಳಿತ ಮೋಕ್ತೇಸರ ಸೇಸಪ್ಪ ರೈ ಕೊರಿಂಜ ಇವರು ಉದ್ಘಾಟಿಸಿ ಮಾತನಾಡಿ ದೇವಸ್ಥಾನದಲ್ಲಿ ಕುಣಿತ ಭಜನಾ ಉದ್ಘಾಟನೆ ಆಗಿರುವುದರಿಂದ ಒಳ್ಳೆಯ ಪೂರಕ ವಾತಾವರಣ ನಿರ್ಮಾಣವಾಗಿದೆ. ಭಜನೆಯಿಂದ ವಿಭಜನೆ ಇಲ್ಲ ಎಂಬ‌ ನುಡಿಯಂತೆ ಪ್ರತಿಯೊಬ್ಬರು ಕೂಡ ನಮ್ಮ ಧರ್ಮವನ್ನು ಉಳಿಸಲು ಭಜನೆಯಿಂದ ಸಾಧ್ಯವಿದೆ ಎಂದರು.

ಕುಣಿತ ಭಜನಾ ತರಬೇತಿಯ ಗುರುಗಳಾದ ನಾಗೇಶ ಬಿ‌ ನೆರಿಯ ಪ್ರಾಸ್ತಾವಿಕವಾಗಿ ಮಾತನಾಡಿ ಇಂದಿನ ಯುಗದಲ್ಲಿ ಭಜನೆಯಿಂದ ನಮ್ಮ ಸಂಸ್ಕೃತಿ, ಸಂಸ್ಕಾರ ಮತ್ತು ಧರ್ಮ ಇವುಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿದೆ. ತಾವೆಲ್ಲರೂ ಪ್ರತಿದಿನ ಮನೆಗಳಲ್ಲಿ ಭಜನೆಯನ್ನು ಮಾಡಬೇಕೆಂದು ತಿಳಿಸಿದರು.

ವೇದಿಕೆಯಲ್ಲಿ ಭಜನಾ ತರಬೇತುದಾರರಾದ ಅಭಿಷೇಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ ಶೆಟ್ಟಿ ಉಪಸ್ಥಿತರಿದ್ದರು.

ಚಿಣ್ಣರ‌ ಬಳಗ ಭಜನಾ ತಂಡದ ಸದಸ್ಯರಾದ ಜ್ಞಾನೇಶ್ ಆಳ್ವ ಕೊರಿಂಜ ಪ್ರಾರ್ಥಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉರುವಾಲು ವಿಭಾಗದ ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ ನಿರೂಪಿಸಿ ಹಾಗೂ ವಂದಿಸಿದರು. ಈ‌ ಸಂದರ್ಭದಲ್ಲಿ ಸತ್ಯನಾರಾಯಣ ಭಜನಾ ಮಂಡಳಿ ಸದಸ್ಯ ಗಣೇಶ ಗೌಡ ಬನಾರಿ‌ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಸದಸ್ಯ ಪ್ರದೀಪ್ ನಾಯ್ಕ ಸಹಕರಿಸಿದರು.

Related posts

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!