ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ವ್ಯಕ್ತಿ ಜತೆಗೆ ಇಂದು ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ.

ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಅನುಚೇತ್, ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಮುಂಜಾನೆಯೇ ಆಗಮಿಸಿದ್ದರು. ದೂರುದಾರ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಿದ್ದಾನೆ. ಕೆಲವು ತಾಸು ಮಾತುಕತೆ ನಡೆಸಿದ ಬಳಿಕ ದಾಖಲೆ ಪಡೆದು ದೂರುದಾರನ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಆಗಮಿಸಿದರು.

ಅರಣ್ಯ ಇಲಾಖೆಯ ಜಾಗಕ್ಕೆ ಸೇರಿದ ಸ್ಥಳದಲ್ಲಿ ತಲೆ ಬರುಡೆ ಅಗೆದಿರುವ ಮಾಹಿತಿಯಿದ್ದು, ಅದೇ ಜಾಗದಲ್ಲಿ ಮಹಜರು ನಡೆಸಲಾಯಿತು. ಕಂದಾಯ ಇಲಾಖೆ, ಸರ್ವೇ ಇಲಾಖೆ, ಐ.ಎಸ್.ಡಿ. (ಅಂತರಿಕ ಭದ್ರತಾ ವಿಭಾಗ), ಎಫ್.ಎಸ್‌.ಎಲ್‌. ವಿಭಾಗದ ಸೋಕೋ ಸಿಬಂದಿ, ಅರಣ್ಯ ಇಲಾಖೆ ತಂಡ ಜತೆಗೆ ಸಹಕರಿಸಿದೆ.

Related posts

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಡ : ಬಸ್ರಾಯ ವೆಂಟೆಡ್ ಡ್ಯಾಮಿನಲ್ಲಿ ಸಿಲುಕಿದ್ದ ಮರಗಳ ತೆರವು: ಗ್ರಾಮಸ್ಥರ ಶ್ರಮದಾನ

Suddi Udaya
error: Content is protected !!