25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ವ್ಯಕ್ತಿ ಜತೆಗೆ ಇಂದು ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ.

ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಅನುಚೇತ್, ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಮುಂಜಾನೆಯೇ ಆಗಮಿಸಿದ್ದರು. ದೂರುದಾರ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಿದ್ದಾನೆ. ಕೆಲವು ತಾಸು ಮಾತುಕತೆ ನಡೆಸಿದ ಬಳಿಕ ದಾಖಲೆ ಪಡೆದು ದೂರುದಾರನ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಆಗಮಿಸಿದರು.

ಅರಣ್ಯ ಇಲಾಖೆಯ ಜಾಗಕ್ಕೆ ಸೇರಿದ ಸ್ಥಳದಲ್ಲಿ ತಲೆ ಬರುಡೆ ಅಗೆದಿರುವ ಮಾಹಿತಿಯಿದ್ದು, ಅದೇ ಜಾಗದಲ್ಲಿ ಮಹಜರು ನಡೆಸಲಾಯಿತು. ಕಂದಾಯ ಇಲಾಖೆ, ಸರ್ವೇ ಇಲಾಖೆ, ಐ.ಎಸ್.ಡಿ. (ಅಂತರಿಕ ಭದ್ರತಾ ವಿಭಾಗ), ಎಫ್.ಎಸ್‌.ಎಲ್‌. ವಿಭಾಗದ ಸೋಕೋ ಸಿಬಂದಿ, ಅರಣ್ಯ ಇಲಾಖೆ ತಂಡ ಜತೆಗೆ ಸಹಕರಿಸಿದೆ.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!