September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ಯುದ್ಧದ ರಜತ ಮಹೋತ್ಸವದ ನೆನಪಿಗಾಗಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ ಜರಗಿತು.

ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ನಿವೃತ್ತ ಸೈನಿಕ ಜನಾರ್ದನ ಕೆ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಭಾರತೀಯ ಸೈನ್ಯ ಹಾಗೂ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯಲ್ಲಿ ಸೇವಾ ಅನುಭವಗಳನ್ನು ಹಂಚಿಕೊಂಡರು ಮತ್ತು ಭಾರತೀಯ ಸೇನೆಗೆ ತಾಂತ್ರಿಕ ವಿಭಾಗದಲ್ಲಿ ಸೇರಲು ಬೇಕಾದ ಮಾಹಿತಿಯನ್ನು ನೀಡಿದರು.

ಸಭಾಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಶುಭಹಾರೈಸಿದರು. ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್ , ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮವನ್ನು ಸ್ವಯಂಸೇವಕಿ ಮಂಜುಷ ಸ್ವಾಗತಿಸಿ, ಅಭಿಜ್ಞಾ ವಂದಿಸಿದರು. ಸ್ವಯಂ ಸೇವಕಿ ಭವಿತಾ ನಿರೂಪಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!