25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

ಕೊರಿಂಜ :ಕೊರಿಂಜ ಉರುವಾಲು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮವು ಶ್ರೀ ಕ್ಷೇತ್ರದ ಸಹ ಆಡಳಿತ ಮೋಕ್ತೇಸರ ಸೇಸಪ್ಪ ರೈ ಕೊರಿಂಜ ಇವರು ಉದ್ಘಾಟಿಸಿ ಮಾತನಾಡಿ ದೇವಸ್ಥಾನದಲ್ಲಿ ಕುಣಿತ ಭಜನಾ ಉದ್ಘಾಟನೆ ಆಗಿರುವುದರಿಂದ ಒಳ್ಳೆಯ ಪೂರಕ ವಾತಾವರಣ ನಿರ್ಮಾಣವಾಗಿದೆ. ಭಜನೆಯಿಂದ ವಿಭಜನೆ ಇಲ್ಲ ಎಂಬ‌ ನುಡಿಯಂತೆ ಪ್ರತಿಯೊಬ್ಬರು ಕೂಡ ನಮ್ಮ ಧರ್ಮವನ್ನು ಉಳಿಸಲು ಭಜನೆಯಿಂದ ಸಾಧ್ಯವಿದೆ ಎಂದರು.

ಕುಣಿತ ಭಜನಾ ತರಬೇತಿಯ ಗುರುಗಳಾದ ನಾಗೇಶ ಬಿ‌ ನೆರಿಯ ಪ್ರಾಸ್ತಾವಿಕವಾಗಿ ಮಾತನಾಡಿ ಇಂದಿನ ಯುಗದಲ್ಲಿ ಭಜನೆಯಿಂದ ನಮ್ಮ ಸಂಸ್ಕೃತಿ, ಸಂಸ್ಕಾರ ಮತ್ತು ಧರ್ಮ ಇವುಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿದೆ. ತಾವೆಲ್ಲರೂ ಪ್ರತಿದಿನ ಮನೆಗಳಲ್ಲಿ ಭಜನೆಯನ್ನು ಮಾಡಬೇಕೆಂದು ತಿಳಿಸಿದರು.

ವೇದಿಕೆಯಲ್ಲಿ ಭಜನಾ ತರಬೇತುದಾರರಾದ ಅಭಿಷೇಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ ಶೆಟ್ಟಿ ಉಪಸ್ಥಿತರಿದ್ದರು.

ಚಿಣ್ಣರ‌ ಬಳಗ ಭಜನಾ ತಂಡದ ಸದಸ್ಯರಾದ ಜ್ಞಾನೇಶ್ ಆಳ್ವ ಕೊರಿಂಜ ಪ್ರಾರ್ಥಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉರುವಾಲು ವಿಭಾಗದ ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ ನಿರೂಪಿಸಿ ಹಾಗೂ ವಂದಿಸಿದರು. ಈ‌ ಸಂದರ್ಭದಲ್ಲಿ ಸತ್ಯನಾರಾಯಣ ಭಜನಾ ಮಂಡಳಿ ಸದಸ್ಯ ಗಣೇಶ ಗೌಡ ಬನಾರಿ‌ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಸದಸ್ಯ ಪ್ರದೀಪ್ ನಾಯ್ಕ ಸಹಕರಿಸಿದರು.

Related posts

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya
error: Content is protected !!