24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಸ್ಥಳ ಮಹಜರು ನಡೆಸಲಿದ್ದಾರೆ.

ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆಸಿಕೊಂಡಿದ್ದು ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದಲ್ಲಿ ಬುರುಡೆ ತೆಗೆದ ಜಾಗಕ್ಕೆ ಹೋಗಿ ಮಹಜರು ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯ ಮುಂದೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ.
FSL ತಂಡ ಕೂಡ ಆಗಮಿಸಿದ್ದು, ಕಂದಾಯ ಇಲಾಖೆ,ಸರ್ವೆ ಇಲಾಖೆ, ಐ.ಎಸ್‌.ಡಿ(ಅಂತರಿಕ ಭದ್ರತಾ ವಿಭಾಗ,ಎಫ್.ಎಸ್.ಲ್ ವಿಭಾಗದ ಸೋಕೋ ಸಿಬ್ಬಂದಿ,ಅರಣ್ಯ ಇಲಾಖೆ ತಂಡ ಕೂಡಾ ಆಗಮಿಸಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya
error: Content is protected !!