25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿಯೊಂದಿಗೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ 13 ಮೃತದೇಹಗಳನ್ನು ಹೂತು ಹಾಕಿದ ಜಾಗಗಳನ್ನು ಸಾಕ್ಷಿದಾರ ತೋರಿಸಿದ್ದಾರೆ ಎನ್ನಲಾಗಿದೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಒಟ್ಟು 4 ಕಡೆಗಳಲ್ಲಿ ಸೇರಿ 13 ಸ್ಥಳಗಳನ್ನು ಗುರುತಿಸಲಾಗಿದೆ. ಬಳಿಕ ಸಾಕ್ಷಿದಾರ ಹಾಗೂ ಅಧಿಕಾರಿಗಳು ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ಬಂದಿದ್ದಾರೆ. ಗುರುತಿಸಿರುವ ಸ್ಥಳಗಳಿಗೆ ಗನ್ ಮ್ಯಾನ್ ಭದ್ರತೆ ನೀಡಲಾಗಿದೆ.

ಅನಾಮಿಕ ವ್ಯಕ್ತಿ ಗುರುತು ಮಾಡಿದ ಸ್ಥಳದಲ್ಲಿ ತಲಾ ಇಬ್ಬರಂತೆ ಶಸ್ತ್ರ ಸಜ್ಜಿತ ಎ ಎನ್ ಎಫ್ ಸಿಬ್ಬಂದಿಯಿಂದ ರಕ್ಷಣೆ ನೀಡಲಾಗಿದ್ದು, ರಾತ್ರಿ ಪೂರ್ತಿ ಪಹರೆಯಲ್ಲಿರಲಿದ್ದಾರೆ.

Related posts

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya
error: Content is protected !!