25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಆನೆಗಳು ಕೃಷಿ ನಾಶಮಾಡುತ್ತಿದ್ದು, ಜು.28 ರಂದು ಮುಂಜಾನೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದೆ.

ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ನಡೆದಿದೆ.ಬಳಿಕ ಆನೆ ಕಾಡಿನತ್ತ ಸಂಚರಿಸಿದ್ದು, ಸ್ವಲ್ಪದರಲ್ಲೇ ಅಪಾಯ ತಪ್ಪಿದೆ.

ಕಳೆದ ಎರಡು ವಾರಗಳ ಹಿಂದೆಯಷ್ಟೆ ಕೊಕ್ಕಡ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕಾಡಾನೆ ದಾಳಿ ಮಾಡಿ ಕೊಂದಿರುವ ನಡುವೆಯೇ ಈ ಘಟನೆ ಸಂಭವಿಸಿರುವುದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಎಡೆಮಾಡಿದೆ.ಬೆಳ್ತಂಗಡಿ ವ್ಯಾಪ್ತಿಯಲ್ಲಿ ನಿರಂತರ ದಾಳಿಯಿಂದ ಕೃಷಿಕರು ನಷ್ಟ ಅನುಭವಿಸಿರುವ ಮಧ್ಯೆಯೇ, ಕಾಡಾನೆಗಳು ಮಾನವನ ಮೇಲೆ ಎರಗಲು ಆರಂಭಿಸಿದೆ. ಇದರಿಂದ ಮುಂಜಾನೆ ಶಾಲಾ ಮಕ್ಕಳು, ಹೈನುಗಾರರು ಜೀವಭಯದಲ್ಲಿ ಸಂಚರಿಸುವಂತಾಗಿದೆ.

Related posts

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya
error: Content is protected !!