22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

ಪುಂಜಾಲಕಟ್ಟೆ : ಶ್ರೀ ಕ್ಷೇ ಧ ಗ್ರಾ, ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಮಡಂತ್ಯಾರು ಶೌರ್ಯ ವಿಪತ್ತು ಘಟಕದಿಂದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ ಮಾಡಲಾಯಿತು.

ಕಾರ್ಯಕ್ರಮ ಮಡಂತ್ಯಾರು ರೋಟರಿ ಕ್ಲಬ್ ನ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕ ದ ಸ್ವಯಂ ಸೇವಕರು ಭಾಗವಹಿಸಿ ರೋಟರಿ ಕ್ಲಬ್ ನ ಅಧ್ಯಕ್ಷ ಮೆಕ್ಸಿಂ ಅಲ್ಬುಕರ್ಕ್, ಕಾಂತಪ್ಪ ಗೌಡ, ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಅನಿತಾ ಬರೋಟ್ಟ, ಕಾರ್ಯಕ್ಷೇತ್ರ ದ ಸೇವಾ ಪ್ರತಿನಿಧಿ ಶ್ರೀಮತಿ ಭಾರತಿ, ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶೌರ್ಯ ಸ್ವಯಂ ಸೇವಕರಾದ ಭರತ್ ಕುಮಾರ್, ದೀಪಕ್ ಹಾರಬೆ, ಪುರುಷೋತ್ತಮ ಪುಂಜಾಲಕಟ್ಟೆ, ಯೋಗೀಶ್ ಕುಮಾರ್, ಸುಜೀತ್ ಕುಮಾರ್, ಶ್ರೀಮತಿ ರಾಜೇಶ್ವರಿ, ಶ್ರೀಮತಿ ಶಕುಂತಳಾ, ಸತೀಶ್ ಆಚಾರ್ಯ ಶ್ರಮದಾನದಲ್ಲಿ ಸಹಕರಿಸಿದರು.

Related posts

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya
error: Content is protected !!