22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

ಬೆಳ್ತಂಗಡಿ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ ಇದರ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ  ಜು. 27 ರಂದು  ಸಮಿತಿಯ ಅಧ್ಯಕ್ಷ ರವಿ ಚಂದ್ರ ನಾಡೆಂಜ‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ 2024ನೇ ಸಾಲಿನ ಕಾರ್ಯಕ್ರಮಗಳ ವರದಿಗಳನ್ನು ಕಾರ್ಯದರ್ಶಿ ಅನಿಲ್ ವಿಕ್ರಂ ಸಭೆಯ ಮುಂದಿಟ್ಟರು, ಜಮಾ ಖರ್ಚು ವಿವರಗಳನ್ನು ಕೋಶಾಧಿಕಾರಿ ಸಂತೋಷ್ ಹಿಮರಡ್ಡ ನೀಡಿದರು. ನಂತರ 2025-26ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ಅಧ್ಯಕ್ಷರಾಗಿ ವಿನಯ್ ಎಂ
ಎಸ್. ಪಡ್ಲಾಡಿ, ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು, ಕೋಶಾಧಿಕಾರಿಯಾಗಿ ರಾಜೇಶ್ ಅಂಕಾಜೆ , ಜೊತೆ ಕಾರ್ಯದರ್ಶಿಯಾಗಿ ವರುಣ್, ಜೊತೆ ಕೋಶಾಧಿಕಾರಿಯಾಗಿ ಪವನ್ ಇವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಆಗಸ್ಟ್ 15 ರಂದು 34 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಪಡ್ಲಾಡಿ ಶಾಲಾ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ಹಾಗೂ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ ನಡೆಸುವ ಬಗ್ಗೆ ತೀರ್ಮಾನಿಸಿ  ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ  ಚರ್ಚಿಸಲಾಯಿತು. ಅಧ್ಯಕ್ಷ ವಿನಯ್ ಎಂ. ಎಸ್ ಎಲ್ಲರ ಸಹಕಾರ ಕೋರಿದರು. ಕಾರ್ಯದರ್ಶಿ ದಿನಕರ್ ಧನ್ಯವಾದವಿತ್ತರು.

Related posts

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya
error: Content is protected !!