22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ಯುದ್ಧದ ರಜತ ಮಹೋತ್ಸವದ ನೆನಪಿಗಾಗಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ ಜರಗಿತು.

ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ನಿವೃತ್ತ ಸೈನಿಕ ಜನಾರ್ದನ ಕೆ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಭಾರತೀಯ ಸೈನ್ಯ ಹಾಗೂ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯಲ್ಲಿ ಸೇವಾ ಅನುಭವಗಳನ್ನು ಹಂಚಿಕೊಂಡರು ಮತ್ತು ಭಾರತೀಯ ಸೇನೆಗೆ ತಾಂತ್ರಿಕ ವಿಭಾಗದಲ್ಲಿ ಸೇರಲು ಬೇಕಾದ ಮಾಹಿತಿಯನ್ನು ನೀಡಿದರು.

ಸಭಾಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಶುಭಹಾರೈಸಿದರು. ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್ , ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮವನ್ನು ಸ್ವಯಂಸೇವಕಿ ಮಂಜುಷ ಸ್ವಾಗತಿಸಿ, ಅಭಿಜ್ಞಾ ವಂದಿಸಿದರು. ಸ್ವಯಂ ಸೇವಕಿ ಭವಿತಾ ನಿರೂಪಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya
error: Content is protected !!