25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

ಬೆಳ್ತಂಗಡಿ: ಸರ್ಕಾರ ಬಂದು ಎರಡು ವರ್ಷ ಆದರೂ, ತಾಲೂಕಿನ ಅಭಿವೃದ್ಧಿ ಬಗ್ಗೆ ಮಾತನಾಡಬೇಕಾಗಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಮಾಡಲು ಶಾಸಕ ಹರೀಶ್ ಪೂಂಜಾ ರವರು ಆಸಕ್ತಿ ತೊರಿಸುತ್ತಿಲ್ಲ. ಎಂದು ತಾಲೂಕು ಪಂಚಾಯತಿ ಮುಂದೆ ಇಂದು ಕೆಡಿಪಿ ಸದಸ್ಯರು ಮತ್ತು ಬೆಳ್ತಂಗಡಿ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವಂತಹ ಜಿಲ್ಲಾ ಕೆಡಿಪಿಯಲ್ಲಿ ಸಕ್ರಿಯವಾಗಿ ಜಿಲ್ಲೆಯ ವಿಚಾರವನ್ನು ಮಾತನಾಡಲಾಗುತ್ತಿದೆ. ಮತ್ತು ಉಸ್ತುವಾರಿ ಸಚಿವರು ಅದರ ಬಗ್ಗೆ ಗಮನವನ್ನು ವಹಿಸುತ್ತಿದ್ದಾರೆ. ಬೆಳ್ತಂಗಡಿಯಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ, ಯಾವುದೇ ಅನುದಾನ ಬರುತ್ತಿಲ್ಲ ಎಂದು ಹೇಳುವ ಶಾಸಕರು ಕೆಡಿಪಿಯನ್ನು ಮಾಡಲಿಕ್ಕೆ ಇನ್ನೂ ಮನಸ್ಸು ಮಾಡುತ್ತಿಲ್ಲ. ಬೆಳ್ತಂಗಡಿಗೆ ಬೇಕಾಗಿರುವಂತಹ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಇಲ್ಲಿಯ ಹಾಳಾಗಿರುವಂತಹ ಸೇತುವೆ, ಬೇರೆ ಬೇರೆ ವಿಚಾರಗಳ ಬಗ್ಗೆ ಚರ್ಚೆ ಮಾಡಿ ಸರ್ಕಾರಕ್ಕೆ ವರದಿ ಒಪ್ಪಿಸುವಂತಹ ಕೆಲಸವನ್ನು ನಾವು ಮಾಡಬೇಕಾಗಿದೆ. ಇಲ್ಲಿ ಅರಣ್ಯ ವಿಚಾರ ಇರಬಹುದು ಅಥವಾ ಇಲ್ಲಿನ ಜ್ವಲಂತ ಸಮಸ್ಯೆಗಳು ಇರಬಹುದು, ಎಲ್ಲದರ ವಿಚಾರದಲ್ಲಿ ಚರ್ಚೆಯನ್ನು ಮಾಡಿ ಸರ್ಕಾರದ ಗಮನಕ್ಕೆ ತರುವಂತಹ ಕೆಲಸವನ್ನು ಈ ಕೆಡಿಪಿ ಸಭೆ ಮುಖಾಂತರ ಮಾಡಬೇಕಾಗುತ್ತದೆ. ಆದರೆ ಶಾಸಕರು ಇದು ಯಾವುದಕ್ಕೂ ಗಮನ ಹರಿಸದೆ ಕೇವಲ ದ್ವೇಷವನ್ನು ಹರಡುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಈಗಾಗಲೇ ಸರ್ಕಾರ ಐದು ಜನ ನಾಮನಿರ್ದೆಶಿತ ಸದಸ್ಯರನ್ನು ನೇಮಕ ಮಾಡಿ ಎರಡು ವರ್ಷ ಆದರೂ ಕೂಡ ಒಂದೇ ಒಂದು ಕೆಡಿಪಿ ಸಭೆ ಮಾಡದೆ ಬೆಳ್ತಂಗಡಿಯ ಅಭಿವೃದ್ಧಿಯನ್ನು ಶಾಸಕರು ಕುಂಟಿತಗೊಳಿಸಿರುತ್ತಾರೆ. ಕೂಡಲೇ ಕೆಡಿಪಿ ಸಭೆಯನ್ನು ಕರೆದು ತಾಲೂಕಿನ ಅಭಿವೃದ್ಧಿಗೆ ಕಡೆ ಗಮನ ಕೊಡಬೇಕೆಂದು ಪ್ರತಿಭಟನೆ ಮುಖಾಂತರ ಶಾಸಕರನ್ನು ಒತ್ತಾಯಿಸಲಾಯಿತು.

ಈ ಪ್ರತಿಭಟನೆ ಸಭೆಯಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ತಾಲೂಕು ಕೆಡಿಪಿ ಸದಸ್ಯರಾದ ಸುನಿಲ್ ಕುಮಾ‌ರ್ ಜೈನ್ ಶಿರ್ಲಾಲು, , ಮೆಲ್ವಿನ್ ಸಿಕ್ಕೇರಾ, ಸುಮತಿ ಶೆಟ್ಟಿ ಕಣಿಯೂರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಿತೇಶ್. ಉಮೇರ ಬಾನು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರು ಸುನಿಲ್ ಡೇಸಾ ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷರು ಹಕೀಮ್ ಕೊಕ್ಕಡ. ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ನಾವೂರು, ಯುವ ಕಾಂಗ್ರೆಸ್ ವಿಧಾನ ಸಭಾ ಕ್ಷೇತ್ರ ಉಪಾಧ್ಯಕ್ಷರು ಅರುಣ್ ಲೋಬೊ, ನವೀನ್ ಗೌಡ ಸವಣಾಲು, ದೀಪಕ್ ಕೋಟ್ಯಾನ್, ಅವಿನಾಶ್ ಕುರ್ತೋಡಿ. ರಾಘವೇಂದ್ರ ಪೂಜಾರಿ , ಗಣೇಶ್ ಕಾಣಿಯೂರು, ಪ್ರಜ್ವಲ್ ಜೈನ್, ಯತೀಶ್ ಧರ್ಮಸ್ಥಳ, ಅಭಿದೇವ್ ಆರಿಗ ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!