ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

ಕೊರಿಂಜ :ಕೊರಿಂಜ ಉರುವಾಲು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮವು ಶ್ರೀ ಕ್ಷೇತ್ರದ ಸಹ ಆಡಳಿತ ಮೋಕ್ತೇಸರ ಸೇಸಪ್ಪ ರೈ ಕೊರಿಂಜ ಇವರು ಉದ್ಘಾಟಿಸಿ ಮಾತನಾಡಿ ದೇವಸ್ಥಾನದಲ್ಲಿ ಕುಣಿತ ಭಜನಾ ಉದ್ಘಾಟನೆ ಆಗಿರುವುದರಿಂದ ಒಳ್ಳೆಯ ಪೂರಕ ವಾತಾವರಣ ನಿರ್ಮಾಣವಾಗಿದೆ. ಭಜನೆಯಿಂದ ವಿಭಜನೆ ಇಲ್ಲ ಎಂಬ‌ ನುಡಿಯಂತೆ ಪ್ರತಿಯೊಬ್ಬರು ಕೂಡ ನಮ್ಮ ಧರ್ಮವನ್ನು ಉಳಿಸಲು ಭಜನೆಯಿಂದ ಸಾಧ್ಯವಿದೆ ಎಂದರು.

ಕುಣಿತ ಭಜನಾ ತರಬೇತಿಯ ಗುರುಗಳಾದ ನಾಗೇಶ ಬಿ‌ ನೆರಿಯ ಪ್ರಾಸ್ತಾವಿಕವಾಗಿ ಮಾತನಾಡಿ ಇಂದಿನ ಯುಗದಲ್ಲಿ ಭಜನೆಯಿಂದ ನಮ್ಮ ಸಂಸ್ಕೃತಿ, ಸಂಸ್ಕಾರ ಮತ್ತು ಧರ್ಮ ಇವುಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿದೆ. ತಾವೆಲ್ಲರೂ ಪ್ರತಿದಿನ ಮನೆಗಳಲ್ಲಿ ಭಜನೆಯನ್ನು ಮಾಡಬೇಕೆಂದು ತಿಳಿಸಿದರು.

ವೇದಿಕೆಯಲ್ಲಿ ಭಜನಾ ತರಬೇತುದಾರರಾದ ಅಭಿಷೇಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಮೇಲ್ವಿಚಾರಕಿ ಶ್ರೀಮತಿ ವಾರಿಜ ವಿ ಶೆಟ್ಟಿ ಉಪಸ್ಥಿತರಿದ್ದರು.

ಚಿಣ್ಣರ‌ ಬಳಗ ಭಜನಾ ತಂಡದ ಸದಸ್ಯರಾದ ಜ್ಞಾನೇಶ್ ಆಳ್ವ ಕೊರಿಂಜ ಪ್ರಾರ್ಥಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉರುವಾಲು ವಿಭಾಗದ ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ ನಿರೂಪಿಸಿ ಹಾಗೂ ವಂದಿಸಿದರು. ಈ‌ ಸಂದರ್ಭದಲ್ಲಿ ಸತ್ಯನಾರಾಯಣ ಭಜನಾ ಮಂಡಳಿ ಸದಸ್ಯ ಗಣೇಶ ಗೌಡ ಬನಾರಿ‌ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಸದಸ್ಯ ಪ್ರದೀಪ್ ನಾಯ್ಕ ಸಹಕರಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ ಎಕ್ಸೆಲ್ ಕಾಲೇಜಿನ 114 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ ದ ಸಾಮಾನ್ಯ ಮಹಾಸಭೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!