ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

ಬೆಳ್ತಂಗಡಿ : ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಮಹಾಸಭೆಯು ಜು.25 ರಂದು ಮಸೀದಿಯಲ್ಲಿ ದ.ಕ.ಜಿಲ್ಲಾ ಸಂಯುಕ್ತ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಪ್ತಿ ಸುಲ್ತಾನುಲ್ ಉಲಮಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನಿರ್ದೇಶನದಂತೆ ಮರ್ಹೂಮ್ ಕೂರತ್ ತಂಙಳ್ ಸುಪುತ್ರ ಅಸ್ಸಯ್ಯದ್ ಮಸ್ ಹೂದ್ ಅಲ್-ಬುಖಾರಿ ಅಲ್ ಅಝ್ಹರಿ ತಂಙಳ್ ಗೌರವಾದ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮುದರ್ರಿಸ್ ಯಾಸಿನ್ ಸಖಾಫಿ ಅಲ್ ಹಿಕಮಿ ನೆರವೇರಿಸಿದರು. ಪ್ರಧಾನ ಕಾರ್ಯದರ್ಶಿ ಹಾರಿಶ್ ಕುಕ್ಕುಡಿ ವರದಿ ವಾಚಿಸಿ ಲೆಕ್ಕಪತ್ರ ಮಂಡಿಸಿದರು. ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್ ಕಜೆಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹಾರಿಶ್ ಕುಕ್ಕುಡಿ, ಕೋಶಾಧಿಕಾರಿಯಾಗಿ ಉದ್ಯಮಿ ಸಂಶುದ್ದೀನ್ ಜೆ, ಉಪಾಧ್ಯಕ್ಷರುಗಳಾಗಿ ಹಾಜಿ ಇಸ್ಮಾಯಿಲ್ ಪರಿಮ, ಮಹಮ್ಮದ್ ಗೋವಿಂದೂರು ಜೊತೆ ಕಾರ್ಯದರ್ಶಿಗಳಾಗಿ ನಾಸಿರ್ ನಡತ್ತೊಟ್ಟು, ಎನ್ ರಫೀಕ್, ಸದಸ್ಯರುಗಳಾಗಿ ಎನ್ ರಫೀಕ್ ಮುಸ್ಲಿಯಾರ್, ಹಾಫಿಳ್ ಅಬ್ದುಲ್ ಲತೀಫ್, ಹಾಜಿ ಅಬೂಬಕ್ಕರ್ ಪಳ್ಳಾದೆ, ಎಂ ಬಿ ಝಕರಿಯ ಮುಸ್ಲಿಯಾರ್, ಕಾಸಿಂ ನಾಳ, ಅಬ್ದುಲ್ ಕರೀಮ್ ನಾಳ, ಇಸ್ಮಾಯಿಲ್ ಎಲ್ತ್ರಡ್ಕ,ಕೆ.ಎಸ್.ಅಬ್ದುಲ್ ರಹಿಮಾನ್ ಕುಕ್ಕುಡಿ, ಮಹಮ್ಮದ್ ಕುಕ್ಕುಡಿ, ಉಮ್ಮರ್ ಕುಂಙಿ ಮೈಲಿಗಲ್ಲು,ಆದಂ ಮುಂಚಳಿಕೆ, ಇಕ್ಬಾಲ್ ಪೈಂಟರ್,ಹೈದರ್ ಎಲ್ತ್ರಡ್ಕ, ಉಮ್ಮರ್ ಪಳ್ಳಾದೆ ಆಯ್ಕೆ ಯಾದರು.

Related posts

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!