July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ವ್ಯಕ್ತಿ ಜತೆಗೆ ಇಂದು ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ.

ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಅನುಚೇತ್, ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಮುಂಜಾನೆಯೇ ಆಗಮಿಸಿದ್ದರು. ದೂರುದಾರ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಿದ್ದಾನೆ. ಕೆಲವು ತಾಸು ಮಾತುಕತೆ ನಡೆಸಿದ ಬಳಿಕ ದಾಖಲೆ ಪಡೆದು ದೂರುದಾರನ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಆಗಮಿಸಿದರು.

ಅರಣ್ಯ ಇಲಾಖೆಯ ಜಾಗಕ್ಕೆ ಸೇರಿದ ಸ್ಥಳದಲ್ಲಿ ತಲೆ ಬರುಡೆ ಅಗೆದಿರುವ ಮಾಹಿತಿಯಿದ್ದು, ಅದೇ ಜಾಗದಲ್ಲಿ ಮಹಜರು ನಡೆಸಲಾಯಿತು. ಕಂದಾಯ ಇಲಾಖೆ, ಸರ್ವೇ ಇಲಾಖೆ, ಐ.ಎಸ್.ಡಿ. (ಅಂತರಿಕ ಭದ್ರತಾ ವಿಭಾಗ), ಎಫ್.ಎಸ್‌.ಎಲ್‌. ವಿಭಾಗದ ಸೋಕೋ ಸಿಬಂದಿ, ಅರಣ್ಯ ಇಲಾಖೆ ತಂಡ ಜತೆಗೆ ಸಹಕರಿಸಿದೆ.

Related posts

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ಆಚರಣೆ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!