ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಆನೆಗಳು ಕೃಷಿ ನಾಶಮಾಡುತ್ತಿದ್ದು, ಜು.28 ರಂದು ಮುಂಜಾನೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದೆ.

ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ನಡೆದಿದೆ.ಬಳಿಕ ಆನೆ ಕಾಡಿನತ್ತ ಸಂಚರಿಸಿದ್ದು, ಸ್ವಲ್ಪದರಲ್ಲೇ ಅಪಾಯ ತಪ್ಪಿದೆ.

ಕಳೆದ ಎರಡು ವಾರಗಳ ಹಿಂದೆಯಷ್ಟೆ ಕೊಕ್ಕಡ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕಾಡಾನೆ ದಾಳಿ ಮಾಡಿ ಕೊಂದಿರುವ ನಡುವೆಯೇ ಈ ಘಟನೆ ಸಂಭವಿಸಿರುವುದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಎಡೆಮಾಡಿದೆ.ಬೆಳ್ತಂಗಡಿ ವ್ಯಾಪ್ತಿಯಲ್ಲಿ ನಿರಂತರ ದಾಳಿಯಿಂದ ಕೃಷಿಕರು ನಷ್ಟ ಅನುಭವಿಸಿರುವ ಮಧ್ಯೆಯೇ, ಕಾಡಾನೆಗಳು ಮಾನವನ ಮೇಲೆ ಎರಗಲು ಆರಂಭಿಸಿದೆ. ಇದರಿಂದ ಮುಂಜಾನೆ ಶಾಲಾ ಮಕ್ಕಳು, ಹೈನುಗಾರರು ಜೀವಭಯದಲ್ಲಿ ಸಂಚರಿಸುವಂತಾಗಿದೆ.

Related posts

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!