26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಆನೆಗಳು ಕೃಷಿ ನಾಶಮಾಡುತ್ತಿದ್ದು, ಜು.28 ರಂದು ಮುಂಜಾನೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದೆ.

ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ನಡೆದಿದೆ.ಬಳಿಕ ಆನೆ ಕಾಡಿನತ್ತ ಸಂಚರಿಸಿದ್ದು, ಸ್ವಲ್ಪದರಲ್ಲೇ ಅಪಾಯ ತಪ್ಪಿದೆ.

ಕಳೆದ ಎರಡು ವಾರಗಳ ಹಿಂದೆಯಷ್ಟೆ ಕೊಕ್ಕಡ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕಾಡಾನೆ ದಾಳಿ ಮಾಡಿ ಕೊಂದಿರುವ ನಡುವೆಯೇ ಈ ಘಟನೆ ಸಂಭವಿಸಿರುವುದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಎಡೆಮಾಡಿದೆ.ಬೆಳ್ತಂಗಡಿ ವ್ಯಾಪ್ತಿಯಲ್ಲಿ ನಿರಂತರ ದಾಳಿಯಿಂದ ಕೃಷಿಕರು ನಷ್ಟ ಅನುಭವಿಸಿರುವ ಮಧ್ಯೆಯೇ, ಕಾಡಾನೆಗಳು ಮಾನವನ ಮೇಲೆ ಎರಗಲು ಆರಂಭಿಸಿದೆ. ಇದರಿಂದ ಮುಂಜಾನೆ ಶಾಲಾ ಮಕ್ಕಳು, ಹೈನುಗಾರರು ಜೀವಭಯದಲ್ಲಿ ಸಂಚರಿಸುವಂತಾಗಿದೆ.

Related posts

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!