25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

ಬೆಳ್ತಂಗಡಿ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ ಇದರ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ  ಜು. 27 ರಂದು  ಸಮಿತಿಯ ಅಧ್ಯಕ್ಷ ರವಿ ಚಂದ್ರ ನಾಡೆಂಜ‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ 2024ನೇ ಸಾಲಿನ ಕಾರ್ಯಕ್ರಮಗಳ ವರದಿಗಳನ್ನು ಕಾರ್ಯದರ್ಶಿ ಅನಿಲ್ ವಿಕ್ರಂ ಸಭೆಯ ಮುಂದಿಟ್ಟರು, ಜಮಾ ಖರ್ಚು ವಿವರಗಳನ್ನು ಕೋಶಾಧಿಕಾರಿ ಸಂತೋಷ್ ಹಿಮರಡ್ಡ ನೀಡಿದರು. ನಂತರ 2025-26ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ಅಧ್ಯಕ್ಷರಾಗಿ ವಿನಯ್ ಎಂ
ಎಸ್. ಪಡ್ಲಾಡಿ, ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು, ಕೋಶಾಧಿಕಾರಿಯಾಗಿ ರಾಜೇಶ್ ಅಂಕಾಜೆ , ಜೊತೆ ಕಾರ್ಯದರ್ಶಿಯಾಗಿ ವರುಣ್, ಜೊತೆ ಕೋಶಾಧಿಕಾರಿಯಾಗಿ ಪವನ್ ಇವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಆಗಸ್ಟ್ 15 ರಂದು 34 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಪಡ್ಲಾಡಿ ಶಾಲಾ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ಹಾಗೂ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ ನಡೆಸುವ ಬಗ್ಗೆ ತೀರ್ಮಾನಿಸಿ  ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ  ಚರ್ಚಿಸಲಾಯಿತು. ಅಧ್ಯಕ್ಷ ವಿನಯ್ ಎಂ. ಎಸ್ ಎಲ್ಲರ ಸಹಕಾರ ಕೋರಿದರು. ಕಾರ್ಯದರ್ಶಿ ದಿನಕರ್ ಧನ್ಯವಾದವಿತ್ತರು.

Related posts

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya
error: Content is protected !!