23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕು ಇದರ ತಾಲೂಕು ವೇದಿಕೆ ಪದಾಧಿಕಾರಿಗಳ ಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ತಾಲೂಕು ಅಧ್ಯಕ್ಷ ಕಾಸಿಂ ಮಲ್ಲಿಗೆಮನೆ ರವರ ಅಧ್ಯಕ್ಷತೆಯಲ್ಲಿ ಜು.28 ರಂದು ನಡೆಯಿತು.

ಸಭೆಯನ್ನು ಸ್ಥಾಪಕ ಅಧ್ಯಕ್ಷ ವಸಂತ್ ಸಾಲಿಯಾನ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ಸದ್ರಿ ಸಭೆಯಲ್ಲಿ, ತೀವ್ರ ಖಂಡನೆ ವ್ಯಕ್ತಪಡಿಸಲಾಯಿತು. ಅನಾಮಧೇಯ ವ್ಯಕ್ತಿ ಮತ್ತು ಪೊಲೀಸ್ ಇಲಾಖೆಗೆ ಸಂಬಂಧಿಸಿದ ತನಿಖಾ ವಿಚಾರಗಳನ್ನು ಮುಂದಿಟ್ಟು ಕ್ಷೇತ್ರಕ್ಕೆ ಹಾಗೂ ಧರ್ಮಾಧಿಕಾರಿಗಳಿಗೆ ಮತ್ತು ಅವರ ಕುಟುಂಬ ವರ್ಗದವರನ್ನು ನವ ಮಾಧ್ಯಮಗಳಲ್ಲಿ ನಿಂದಿಸುವ ಹಾಗೂ ಕ್ಷೇತ್ರಕ್ಕೆ ಅಪಚಾರವೆಸಗುವ ಅಪಪ್ರಚಾರಗಳನ್ನು ಪದೇ ಪದೇ ಗೈಯ್ಯುತ್ತಿರುವ ವಿಚಾರವನ್ನು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಖಾವಂದರ ಜನಪರವಾದ ಎಲ್ಲಾ ಕಾರ್ಯ ಯೋಜನೆಗಳ ಬಗ್ಗೆ ಅದಕ್ಕೆ ಧಕ್ಕೆಯಾಗದಂತೆ ಜನ ಜಾಗೃತಿ ವೇದಿಕೆ ಜೊತೆ ನಿಲ್ಲುವುದೆಂದೂ ತಮ್ಮ ಸ್ಪಷ್ಟ ನಿಲುವು ಮತ್ತೊಮ್ಮೆ ಪ್ರಕಟಿಸಲಾಯಿತು.

ಸಭೆಯಲ್ಲಿ ವರದಿ ಸಾಧನಾ ವಿವರವನ್ನು ಮಂಡಿಸಲಾಯಿತು. ಆ ಬಳಿಕ 2025- 26ನೇ ಸಾಲಿನ ಕ್ರಿಯಾಯೋಜನೆಯ ಅನುಷ್ಠಾನದ ಕುರಿತು ಚರ್ಚಿಸಲಾಯಿತು. ಜಿಲ್ಲಾಧಿಕಾರಿಗಳ ಸೂಚನೆಯಂತೆ ಪ್ರತಿಯೊಂದು ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ವಿರೋಧಿ ಸಮಿತಿಯನ್ನು ರಚನೆ ಮಾಡಿ ಜಾಗೃತಿ ಮೂಡಿಸುವ ಕಾರ್ಯ ಸ್ವಾಗತಾರ್ಹ ಎಂದು ಅಭಿಪ್ರಾಯಕ್ಕೆ ಬರಲಾಯಿತು. ಆ ನಿಟ್ಟಿನಲ್ಲಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ 30 ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ದುಶ್ಚಟದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ವಿಶ್ವ ತಂಬಾಕು ವಿರೋಧಿ ದಿನಾಚರಣೆ ಹಾಗೂ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಸಮರ್ಪಕವಾಗಿ ಆಚರಿಸಿರುವ ಬಗ್ಗೆ ಸಭೆಯ ಗಮನಕ್ಕೆ ತರಲಾಯಿತು. ಅನಧಿಕೃತ ಮಧ್ಯ ಮಾರಾಟ ಹಾಗೂ ಕೋಳಿ ಅಂಕದ ಬಗ್ಗೆ ಕ್ರಮ ಕೈಗೊಳ್ಳುವಂತೆ ನಿರ್ಣಯಿಸಲಾಯಿತು. ವರ್ಷಾಂತ್ಯದಲ್ಲಿ ಗುರುವಾಯನಕೆರೆ ಕಚೇರಿ ವ್ಯಾಪ್ತಿಯ ಪ್ರದೇಶದಲ್ಲಿ ಮದ್ಯವರ್ಜನ ಶಿಬಿರ ನಡೆಸುವುದರ ಬಗ್ಗೆಯೂ ಹಾಗೂ ನವ ಜೀವನ ಸಮಿತಿ ಸದಸ್ಯರ ಅನು ಪಾಲನೆಯ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಅನಾಮಿಕ ವ್ಯಕ್ತಿ ಧರ್ಮಸ್ಥಳದ ಆಸು ಪಾಸು ಅನಧಿಕೃತವಾಗಿ ಶವಗಳನ್ನು ಹೂಳಲಾಗಿದೆ ಎನ್ನುವ ವಿಚಾರದಂತೆ ರಾಜ್ಯ ಸರಕಾರ ಈ ಪ್ರಕರಣವನ್ನು ಎಸ್ಐಟಿ ತಂಡ ರಚಿಸಿ ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ ಎಂದ ತಾಲೂಕು ಜನಜಾಗೃತಿ ವೇದಿಕೆ ಸ್ವಾಗತಿಸಿತು.

ಜನ ಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ವೆಂಕಟರಾಯ ಅಡೂರ್, ಡಿ.ಎ ರಹಿಮಾನ್, ತಿಮ್ಮಪ್ಪ ಗೌಡ ಬೆಳಾಲು, ಎಲ್ಲಾ ವಲಯದ ವಲಯ ಅಧ್ಯಕ್ಷರು ಹಾಗೂ ಜನಜಾಗೃತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾ.ಯೋ. ನೂತನ ಜಿಲ್ಲಾ ನಿರ್ದೇಶಕ ದಿನೇಶ್ ತಮ್ಮ ಪರಿಚಯ ಮಾಡಿಕೊಂಡು ಸಭೆಯಲ್ಲಿ ಮಾತನಾಡಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಿಸ್ ವಿಚಾರ ಮಂಡಿಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಅಚಾರ್ಯ ಕ್ರಿಯಾ ಯೋಜನೆ ಮಂಡಿಸಿದರು. ಬೆಳ್ತಂಗಡಿ ಯೋಜನಾಧಿಕಾರಿ ಯಶೋಧರ ಕೆ ಸ್ವಾಗತಿಸಿದರು. ತಾ.ಸದಸ್ಯೆ ಮಂಜುಳಾ ಕಾರಂತ ಪ್ರಾರ್ಥನೆ ಹಾಡಿದರು. ಗುರುವಾಯನಕೆರೆ ಯೋಜನಾಧಿಕಾರಿ ಅಶೋಕ್ ಧನ್ಯವಾದವಿತ್ತರು.


Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!