September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ಯುದ್ಧದ ರಜತ ಮಹೋತ್ಸವದ ನೆನಪಿಗಾಗಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ ಜರಗಿತು.

ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ನಿವೃತ್ತ ಸೈನಿಕ ಜನಾರ್ದನ ಕೆ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಭಾರತೀಯ ಸೈನ್ಯ ಹಾಗೂ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯಲ್ಲಿ ಸೇವಾ ಅನುಭವಗಳನ್ನು ಹಂಚಿಕೊಂಡರು ಮತ್ತು ಭಾರತೀಯ ಸೇನೆಗೆ ತಾಂತ್ರಿಕ ವಿಭಾಗದಲ್ಲಿ ಸೇರಲು ಬೇಕಾದ ಮಾಹಿತಿಯನ್ನು ನೀಡಿದರು.

ಸಭಾಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಶುಭಹಾರೈಸಿದರು. ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್ , ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮವನ್ನು ಸ್ವಯಂಸೇವಕಿ ಮಂಜುಷ ಸ್ವಾಗತಿಸಿ, ಅಭಿಜ್ಞಾ ವಂದಿಸಿದರು. ಸ್ವಯಂ ಸೇವಕಿ ಭವಿತಾ ನಿರೂಪಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂಗೇರ ಬ್ರಿಗೇಡ್ ಪಡಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya
error: Content is protected !!