25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ


ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ವಿದ್ವತ್ ಪಿ.ಯು
ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.


ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ.ಇ. ಮಂಡಗಳಲೆ ಮಾತನಾಡಿ, 1999 ರ ಕಾರ್ಗಿಲ್ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಭಾರತೀಯ ಸೈನಿಕರ ಶೌರ್ಯವನ್ನು ಗೌರವಿಸಲು ಜು.26 ರಂದು ದೇಶದಾದ್ಯಂತ “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಆಚರಿಸಲಾಗುತ್ತದೆ. ಈ ದಿನವು ಸಂಘರ್ಷದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸಾಧಿಸಿದ ವಿಜಯ ಮತ್ತು ಅಪರೇಷನ್ ವಿಜಯ್ ನ ಯಶಸ್ವಿ ಸಮಾಪ್ತಿಗೆ 26 ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಸುಮಾರು 60 ದಿನಗಳ ಕಾಲ ನಡೆದ ಕಾರ್ಗಿಲ್ ಯುದ್ಧ ಈ ದಿನದಂದು ಕೊನೆಗೊಂಡಿತು. ಭಾರತೀಯ ರಕ್ಷಣಾ ಪಡೆಗಳು ಪಾಕಿಸ್ತಾನ ಸೈನ್ಯಕ್ಕೆ ಸೂಕ್ತ ಉತ್ತರ ನೀಡಿ ತ್ರಿವರ್ಣ ಧ್ವಜವನ್ನು ಹಾರಿಸಿ ಸಂಭ್ರಮಿಸಿದ ದಿನವಾಗಿದೆ ಎಂದು ತಿಳಿಸಿದರು.

ನಂತರ ವಿದ್ಯಾರ್ಥಿಗಳಿಗೆ ಕಾರ್ಗಿಲ್ ನಲ್ಲಿ ಯೋಧರು ಹೋರಾಡಿದ ವೀಡಿಯೋ ದೃಶ್ಯಗಳನ್ನು, ಯೋಧರು ಸಂಭ್ರಮಿಸಿದ
ಕ್ಷಣಗಳ ವೀಡಿಯೋಗಳನ್ನು, ಮತ್ತು ದೇಶಭಕ್ತಿಗೀತೆಗಳ ವೀಡಿಯೋಗಳನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ,
ಪ್ರಾಂಶುಪಾಲರಾದ ಹರೀಶ್ ಕೆ.ಆರ್, ಉಪಸ್ಥಿತರಿದ್ದರು.

ಕಾಲೇಜಿನ ಕನ್ನಡ ಉಪನ್ಯಾಸಕ ನೀಲಕಂಠ ಸ್ವಾಗತಿಸಿದರು.

Related posts

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಹಾಗೂ ಇಂಟರ್ನೆಟ್ ಕ್ಲಬ್ ಆಶ್ರಯದಲ್ಲಿ ಶುಗರ್ ಹಾಗೂ ಬಿಪಿ ತಪಾಸಣೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya
error: Content is protected !!