25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ : ನಾಗರ ಪಂಚಮಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ರೋಗಿಗಳಿಗೆ ಉಚಿತವಾಗಿ ಹಾಲು , ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಬಗ್ಗೆ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್. ಎಂ ರವರು ದೇಶದಲ್ಲಿ 28 ಕೋಟಿ ಜನರು ಒಂದು ತೊಟ್ಟು ಹಾಲು ಖರೀದಿಸಲು ಸಾಧ್ಯವಿಲ್ಲದೆ ಜೀವಿಸುತ್ತಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಅಪೌಷ್ಟಿಕತೆಯ ಕೊರತೆಯಿಂದ ಮಕ್ಕಳು , ಮಹಿಳೆಯರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನಾವು ನಾಗರ ಪಂಚಮಿ ಹೆಸರಿನಲ್ಲಿ ಕಲ್ಲಿಗೆ , ಹುತ್ತಗಳಿಗೆ ಹಾಲು ಚೆಲ್ಲುವ ಮೂಲಕ ದುರುಪಯೋಗ ಮಾಡುತ್ತೇವೆ. ಅದರ ಬದಲಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ , ರೋಗಿಗಳಿಗೆ ನೀಡಿದರೆ ಉತ್ತಮ. ರೆಡ್ ಕ್ರಾಸ್ ಸೊಸೈಟಿ ಇಡೀ ಜಗತ್ತಿನಾದ್ಯಂತ ಅಪೌಷ್ಟಿಕತೆಯ ವಿರುದ್ಧ ಸಮರ ಸಾರಿದ್ದು , ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ರೋಗಿಗಳಿಗೆ ಹಾಲು , ಹಣ್ಣುಹಂಪಲು ವಿತರಣೆ ಮಾಡಲಾಯಿತು ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಕೆ , ಹಿರಿಯ ಸುಶ್ರುಕ್ರಿ ಪೊನ್ನಮ್ಮ , ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಯಶವಂತ ಪಟವರ್ಧನ್ , ಜೋನ್ ಅರ್ವಿನ್ ಡಿಸೋಜ , ನಿರ್ದೇಶಕಿ ನ್ಯಾಯವಾದಿ ಸುಕನ್ಯಾ ಹೆಚ್ , ಸದಸ್ಯ ಶೇಖರ್ ಲಾಯಿಲ , ಎಕೆಜಿ ಸೊಸೈಟಿ ಸಿಬ್ಬಂದಿಗಳಾದ ಸಂಜೀವ ಆರ್ , ಕು. ಕೀರ್ತನಾ ಉಪಸ್ಥಿತರಿದ್ದರು .

Related posts

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!