25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

ಬೆಳ್ತಂಗಡಿ : ಕೂಟ ಮಹಾಜಗತ್ತು ಬೆಳ್ತಂಗಡಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟದ ಕಾರ್ಯಕ್ರಮ ಜು.27 ರಂದು ಉಜಿರೆಯ ಅರಿಪ್ಪಾಡಿ ಮಠದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಕೂಟ ಮಹಾಜಗತ್ತು ಬೆಳ್ತಂಗಡಿಯ ಅಂಗಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ ಹಾಗೂ ನೂತನ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗೀತಾ ವಿಶ್ವಾಸ ರಾವ್ ಉದ್ಘಾಟಿಸಿದರು. ವೇದಿಕೆಯಲ್ಲಿ ನಳಿನಿ ಹೊಳ್ಳ, ಪ್ರಕಾಶ್ ನಾರಾಯಣ ಚಾರ್ಮಾಡಿ, ಶರತ್ ಕುಮಾರ್ ಹಾಗೂ ಅಕ್ಷತಾ ಅಡೂರ್ ಉಪಸ್ಥಿತರಿದ್ದರು. ಆಟಿ ಮಾಸದ ವಿಶೇಷತೆ ಹಾಗೂ ಆಚರಣೆಯ ಕುರಿತು ವಾಸುದೇವ ಸೋಮಯಾಜಿ ಮಾಹಿತಿ ನೀಡಿದರು.

ವಿದ್ಯಾಶ್ರೀ ಅಡೂರ್ ಸ್ವಾಗತಿಸಿದರು. ಅಂಗಸಂಸ್ಥೆಯ ಮಹಿಳೆಯರಿಗೆ, ಪುರುಷರಿಗೆ, ಹಾಗೂ ಮಕ್ಕಳಿಗೆ ವಿವಿಧ ವಿನೋದಾವಳಿ ಆಟಗಳನ್ನು ಶ್ರೀಮತಿ ಆಶಾ ಅಡೂರ್ ನಿರ್ವಹಿಸಿದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಹಿಳಾ ವೇದಿಕೆಯ ನೂತನ ಕಾರ್ಯದರ್ಶಿ ಸಂತೋಷಿಣಿ ಕಾರಂತ್ ಕಾರ್ಯಕ್ರಮವನ್ನು ನಿರೂಪಿಸಿ, ಮೇಘನಾ ಪ್ರಶಾಂತ್ ಹೊಳ್ಳ ವಂದಿಸಿದರು. ಲಾವಣ್ಯ ಹೊಳ್ಳ ಹಾಗೂ ಮಾಲತಿ ರಾವ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಹಿಳೆಯರು ಮನೆಯಲ್ಲಿ ತಯಾರಿಸಿದ ವಿವಿಧ ಬಗೆಯ ಆಟಿಯ ವಿಶೇಷ ಖಾದ್ಯಗಳನ್ನು ತಂದು ಎಲ್ಲರಿಗೂ ಉಣಬಡಿಸಿದರು. ಖಾದ್ಯಗಳನ್ನು ತಯಾರಿಸಿದ ಮಹಿಳೆಯರಿಗೆ ಸಭೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೂಟ ಮಹಾಜಗತ್ತು ಅಂಗಸಂಸ್ಥೆಯ ಸದಸ್ಯರು, ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya
error: Content is protected !!