July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

ಬೆಳ್ತಂಗಡಿ : ಕೂಟ ಮಹಾಜಗತ್ತು ಬೆಳ್ತಂಗಡಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟದ ಕಾರ್ಯಕ್ರಮ ಜು.27 ರಂದು ಉಜಿರೆಯ ಅರಿಪ್ಪಾಡಿ ಮಠದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಕೂಟ ಮಹಾಜಗತ್ತು ಬೆಳ್ತಂಗಡಿಯ ಅಂಗಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ ಹಾಗೂ ನೂತನ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗೀತಾ ವಿಶ್ವಾಸ ರಾವ್ ಉದ್ಘಾಟಿಸಿದರು. ವೇದಿಕೆಯಲ್ಲಿ ನಳಿನಿ ಹೊಳ್ಳ, ಪ್ರಕಾಶ್ ನಾರಾಯಣ ಚಾರ್ಮಾಡಿ, ಶರತ್ ಕುಮಾರ್ ಹಾಗೂ ಅಕ್ಷತಾ ಅಡೂರ್ ಉಪಸ್ಥಿತರಿದ್ದರು. ಆಟಿ ಮಾಸದ ವಿಶೇಷತೆ ಹಾಗೂ ಆಚರಣೆಯ ಕುರಿತು ವಾಸುದೇವ ಸೋಮಯಾಜಿ ಮಾಹಿತಿ ನೀಡಿದರು.

ವಿದ್ಯಾಶ್ರೀ ಅಡೂರ್ ಸ್ವಾಗತಿಸಿದರು. ಅಂಗಸಂಸ್ಥೆಯ ಮಹಿಳೆಯರಿಗೆ, ಪುರುಷರಿಗೆ, ಹಾಗೂ ಮಕ್ಕಳಿಗೆ ವಿವಿಧ ವಿನೋದಾವಳಿ ಆಟಗಳನ್ನು ಶ್ರೀಮತಿ ಆಶಾ ಅಡೂರ್ ನಿರ್ವಹಿಸಿದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಹಿಳಾ ವೇದಿಕೆಯ ನೂತನ ಕಾರ್ಯದರ್ಶಿ ಸಂತೋಷಿಣಿ ಕಾರಂತ್ ಕಾರ್ಯಕ್ರಮವನ್ನು ನಿರೂಪಿಸಿ, ಮೇಘನಾ ಪ್ರಶಾಂತ್ ಹೊಳ್ಳ ವಂದಿಸಿದರು. ಲಾವಣ್ಯ ಹೊಳ್ಳ ಹಾಗೂ ಮಾಲತಿ ರಾವ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಹಿಳೆಯರು ಮನೆಯಲ್ಲಿ ತಯಾರಿಸಿದ ವಿವಿಧ ಬಗೆಯ ಆಟಿಯ ವಿಶೇಷ ಖಾದ್ಯಗಳನ್ನು ತಂದು ಎಲ್ಲರಿಗೂ ಉಣಬಡಿಸಿದರು. ಖಾದ್ಯಗಳನ್ನು ತಯಾರಿಸಿದ ಮಹಿಳೆಯರಿಗೆ ಸಭೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೂಟ ಮಹಾಜಗತ್ತು ಅಂಗಸಂಸ್ಥೆಯ ಸದಸ್ಯರು, ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಶೇಡಿಯಿಂದ ಕುಕ್ಕಾಜೆ ಯವರೆಗೆ ರಸ್ತೆ ಬದಿಯ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya
error: Content is protected !!