25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ – ಟಿಆರ್‌ಎಮ್ ಮದ್ದಡ್ಕ ಇದರ ಮಹಾಸಭೆಯು ಮುರ್ಶಿದುಲ್ ಅನಾಮ್ ಅರೆಬಿಕ್ ಮದರಸ ಆಲಂದಿಲದಲ್ಲಿ ಜರುಗಿತು.


ನೂರುಲ್ ಹುದಾ ಜುಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್ ಚಿಲಿಂಬಿ ಅದ್ಯಕ್ಷತೆ ವಹಿಸಿದ್ದರು. ಉಸ್ಮಾನ್ ಸಖಾಫಿ ಆರಂಭಿಕ ದುಆ ನೆರವೇರಿಸಿದರು. ಈ ವೇಳೆ 2025-26 ನೇ ಸಾಲಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು.


ಅಧ್ಯಕ್ಷರಾಗಿ ರಾಝಿಯುದ್ದಿನ್ ಸಬರಬೈಲ್, ಉಪಾಧ್ಯಕ್ಷರಾಗಿ ರಿಯಾಝ್ ಆಲಂದಿಲ ಮತ್ತು ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ರವೂಫ್, ಕಾರ್ಯದರ್ಶಿಯಾಗಿ ಮುಸ್ತಫ ಮತ್ತು ಜಮಾಲುದ್ದೀನ್ ಲತ್ವೀಫಿ, ಕೋಶಾಧಿಕಾರಿಯಾಗಿ ಉಸ್ಮಾನ್ ಹಾಜಿ ಆಲಂದಿಲ, ಲೆಕ್ಕ ಪರಿಶೋಧಕರಾಗಿ ಹಾಜಿ ಉಮರ್ ಮಾಸ್ಟರ್ ಆಯ್ಕೆಯಾದರು.


ಸಭೆಯಲ್ಲಿ ನೂರುಲ್ ಹುದಾ ಜುಮಾ ಮಸ್ಜಿದ್ ಖತೀಬ್ ಹಾಫಿಳ್ ಮುಈನುದ್ದೀನ್ ಅಮ್ಜದಿ ಇವರ ನೇತೃತ್ವದಲ್ಲಿ ಸಯ್ಯಿದ್ ಕೂರತ್ ತಂಙಳ್ ಅನುಸ್ಮರಣೆ ನಡೆಸಲಾಯಿತು. ಸಲಹಾ ಸಮೀತಿಯ ಸದಸ್ಯರಾದ ರಾಝಿಯುದ್ದೀನ್ ಸಬರಬೖಲ್, ಅಬ್ಬೋನು ಮದ್ದಡ್ಕ, ಉಸ್ಮಾನ್ ಹಾಜಿ ಆಲಂದಿಲ, ಅಶ್ರಫ್ ಚಿಲಿಂಬಿ, ಹಾಜಿ ಉಮರ್ ಮಾಸ್ಟರ್ ಮದ್ದಡ್ಕ, ಮುಹಮ್ಮದ್ ರಫೀಕ್ ಚಿಲಿಂಬಿ, ಎಂ. ಹೆಚ್. ಅಬೂಬಕ್ಕರ್ ಕಿನ್ನಿಗೋಳಿ, ಹೆಚ್. ಎಂ. ಹಸನಬ್ಬ ಚಿಲಿಂಬಿ, ಎಂ ಉಮರಬ್ಬ (ಯು. ಆರ್.) ಎಂ ಹೈದೆರ್ ಹಾಜಿ ಮದ್ದಡ್ಕ ಉಪಸ್ಥಿತರಿದ್ದರು. ನೂರುಲ್ ಹುದಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಎಂ. ಬದ್ರುದ್ದೀನ್ ಮದ್ದಡ್ಕ ಇವರು ಸಂಸ್ಥೆಗೆ ಶುಭ ಹಾರೈಸಿದರು.

Related posts

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya
error: Content is protected !!