July 23, 2026
ಅಪರಾಧ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

13 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ ಆರಂಭವಾದ ಅಗೆಯುವ ಕೆಲಸ ಮಧ್ಯಾಹ್ನ 2.30 ರವರೆಗೆ ನಡೆಯಿತು. ಕಳೇಬರ ಅಲ್ಲೆಲ್ಲೂ ಸಿಗದ ಸಮಯದಲ್ಲಿ ದೂರುದಾರ ಮತ್ತಷ್ಟು ಅಗೆಯುವಂತೆ ಒತ್ತಾಯಿಸಿದರು. ಕಡೆಗೆ ತನಿಖಾಧಿಕಾರಿ ಅನುಚೇತ್ ಸೂಚನೆಯಂತೆ ಮಿನಿ ಹಿಟಾಚಿ ಕರೆಸಲಾಯಿತು. ಮಧ್ಯಾಹ್ನ 3.30 ರಿಂದ ಆರಂಭವಾದ ಹಿಟಾಚಿ ಕಾರ್ಯಾಚರಣೆ ಈವರೆಗೆ ನಿಂತಿಲ್ಲ. ನಿರಂತರ ಕಾರ್ಯಾಚರಣೆಯಿಂದ ಹೊಂಡದ ರೂಪವಾಗಿದೆ.

ಅನಾಮಿಕ ಗುರುತಿಸಿದ ಮೊದಲ ಸ್ಥಳದಲ್ಲೇ ಕಳೇಬರ ಸಿಗದಿರುವುದು, ಜತೆಗೆ ಮಳೆಯಿಂದಾಗಿ ಹೊಂಡದಲ್ಲಿ ಒರತೆ ನೀರು ತುಂಬುತ್ತಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ. ಕಾರ್ಯಾಚರಣೆಗೆ ಇದೀಗ ಶ್ವಾನ ದಳದ ಎಂಟ್ರಿಯಾಗಿದೆ. ಕಾರ್ಮಿಕರು ಹಾಗೂ ಹಿಟಾಚಿ ಕಾರ್ಯಾಚರಣೆ ನಡೆಸಿದರೂ ಸಿಗದ ಕಳೇಬರಹ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಒಟ್ಟು 4 -5 ಗಂಟೆಗಳ ಕಾರ್ಯಾಚರಣೆ ನಡೆಸಿದರು ಕಳೇಬರಹ ಸಿಗದೆ ಇದ್ದು ಕಾರ್ಯಾಚರಣೆಗೆ ಮೊದಲ ಹಿನ್ನಡೆಯಾಗಿದ್ದು ಇಂದಿನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya
error: Content is protected !!