23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇದರ ಸಂಯುಕ್ತ ಆಶಯದೊಂದಿಗೆ ಸ್ವಾಸ್ಥ್ಯ ಮನಸ್ ಶಿಕ್ಷಾ ಎಂಬ ಶೀರ್ಷಿಕೆ ಅಡಿಯಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದ ಸಂಘಟಕರಾದ ಶ್ರೀಮತಿ ಪದ್ಮಶ್ರೀ. ಕೆ ಸಹಾಯಕ ಪ್ರಾಧ್ಯಾಪಕರು ಮನೋವಿಜ್ಞಾನ ವಿಭಾಗ
ಎಸ್‌ಡಿಎಂ ಕಾಲೇಜು ಉಜಿರೆ (ಸ್ವಾಯತ್ತ) ಇವರು ಆಗಮಿಸಿದ್ದರು. ಇವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೋವಿಜ್ಞಾನ ವಿಭಾಗ ಎಸ್‌ಡಿಎಂ ಕಾಲೇಜು ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಈ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಕಾರ್ಯಗಾರದಲ್ಲಿ ವಿದ್ಯಾರ್ಥಿಗಳ ಮನಸ್ಸಿನ ಹಿಡಿತ, ಓದಿನ ಕಡೆಗಿನ ಗಮನ ,ಸಮಯದ ಸದುಪಯೋಗ ಹಾಗೂ ಅದನ್ನ ಉಪಯೋಗಿಸುವ ಕಲೆ, ಜೊತೆಗೆ ವಿದ್ಯಾರ್ಥಿಗಳ ಸಾಧನೆಗೆ ಇರುವ ವಿವಿಧ ದಾರಿಗಳು ಇತ್ಯಾದಿಗಳ ಕುರಿತಾಗಿ ಹಲವಾರು ಉದಾಹರಣೆ, ಚಟುವಟಿಕೆ ಇತ್ಯಾದಿಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಈ ಕಾರ್ಯಕ್ರಮದ ಕುರಿತಾಗಿ ಹಾಗೂ ಇದರ ಅಗತ್ಯತೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. . ಶಾಲಾ ವಿದ್ಯಾರ್ಥಿನಿ ಕುಮಾರಿ ನಿವೇದ್ಯಯ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ತನ್ವಿ ಸ್ವಾಗತಿಸಿ, ವಿಜಯ್ ಸಂಘಟಕರ ಕಿರುಪರಿಚಯವನ್ನು ನೀಡಿ ಕುಮಾರಿ ಸಿಂಧೂರ ಧನ್ಯವಾದವಿತ್ತರು.

Related posts

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya
error: Content is protected !!