25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ


ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ವಿದ್ವತ್ ಪಿ.ಯು
ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.


ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ.ಇ. ಮಂಡಗಳಲೆ ಮಾತನಾಡಿ, 1999 ರ ಕಾರ್ಗಿಲ್ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಭಾರತೀಯ ಸೈನಿಕರ ಶೌರ್ಯವನ್ನು ಗೌರವಿಸಲು ಜು.26 ರಂದು ದೇಶದಾದ್ಯಂತ “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಆಚರಿಸಲಾಗುತ್ತದೆ. ಈ ದಿನವು ಸಂಘರ್ಷದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸಾಧಿಸಿದ ವಿಜಯ ಮತ್ತು ಅಪರೇಷನ್ ವಿಜಯ್ ನ ಯಶಸ್ವಿ ಸಮಾಪ್ತಿಗೆ 26 ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಸುಮಾರು 60 ದಿನಗಳ ಕಾಲ ನಡೆದ ಕಾರ್ಗಿಲ್ ಯುದ್ಧ ಈ ದಿನದಂದು ಕೊನೆಗೊಂಡಿತು. ಭಾರತೀಯ ರಕ್ಷಣಾ ಪಡೆಗಳು ಪಾಕಿಸ್ತಾನ ಸೈನ್ಯಕ್ಕೆ ಸೂಕ್ತ ಉತ್ತರ ನೀಡಿ ತ್ರಿವರ್ಣ ಧ್ವಜವನ್ನು ಹಾರಿಸಿ ಸಂಭ್ರಮಿಸಿದ ದಿನವಾಗಿದೆ ಎಂದು ತಿಳಿಸಿದರು.

ನಂತರ ವಿದ್ಯಾರ್ಥಿಗಳಿಗೆ ಕಾರ್ಗಿಲ್ ನಲ್ಲಿ ಯೋಧರು ಹೋರಾಡಿದ ವೀಡಿಯೋ ದೃಶ್ಯಗಳನ್ನು, ಯೋಧರು ಸಂಭ್ರಮಿಸಿದ
ಕ್ಷಣಗಳ ವೀಡಿಯೋಗಳನ್ನು, ಮತ್ತು ದೇಶಭಕ್ತಿಗೀತೆಗಳ ವೀಡಿಯೋಗಳನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ,
ಪ್ರಾಂಶುಪಾಲರಾದ ಹರೀಶ್ ಕೆ.ಆರ್, ಉಪಸ್ಥಿತರಿದ್ದರು.

ಕಾಲೇಜಿನ ಕನ್ನಡ ಉಪನ್ಯಾಸಕ ನೀಲಕಂಠ ಸ್ವಾಗತಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!