22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ


ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ವಿದ್ವತ್ ಪಿ.ಯು
ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.


ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ.ಇ. ಮಂಡಗಳಲೆ ಮಾತನಾಡಿ, 1999 ರ ಕಾರ್ಗಿಲ್ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಭಾರತೀಯ ಸೈನಿಕರ ಶೌರ್ಯವನ್ನು ಗೌರವಿಸಲು ಜು.26 ರಂದು ದೇಶದಾದ್ಯಂತ “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಆಚರಿಸಲಾಗುತ್ತದೆ. ಈ ದಿನವು ಸಂಘರ್ಷದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸಾಧಿಸಿದ ವಿಜಯ ಮತ್ತು ಅಪರೇಷನ್ ವಿಜಯ್ ನ ಯಶಸ್ವಿ ಸಮಾಪ್ತಿಗೆ 26 ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಸುಮಾರು 60 ದಿನಗಳ ಕಾಲ ನಡೆದ ಕಾರ್ಗಿಲ್ ಯುದ್ಧ ಈ ದಿನದಂದು ಕೊನೆಗೊಂಡಿತು. ಭಾರತೀಯ ರಕ್ಷಣಾ ಪಡೆಗಳು ಪಾಕಿಸ್ತಾನ ಸೈನ್ಯಕ್ಕೆ ಸೂಕ್ತ ಉತ್ತರ ನೀಡಿ ತ್ರಿವರ್ಣ ಧ್ವಜವನ್ನು ಹಾರಿಸಿ ಸಂಭ್ರಮಿಸಿದ ದಿನವಾಗಿದೆ ಎಂದು ತಿಳಿಸಿದರು.

ನಂತರ ವಿದ್ಯಾರ್ಥಿಗಳಿಗೆ ಕಾರ್ಗಿಲ್ ನಲ್ಲಿ ಯೋಧರು ಹೋರಾಡಿದ ವೀಡಿಯೋ ದೃಶ್ಯಗಳನ್ನು, ಯೋಧರು ಸಂಭ್ರಮಿಸಿದ
ಕ್ಷಣಗಳ ವೀಡಿಯೋಗಳನ್ನು, ಮತ್ತು ದೇಶಭಕ್ತಿಗೀತೆಗಳ ವೀಡಿಯೋಗಳನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ,
ಪ್ರಾಂಶುಪಾಲರಾದ ಹರೀಶ್ ಕೆ.ಆರ್, ಉಪಸ್ಥಿತರಿದ್ದರು.

ಕಾಲೇಜಿನ ಕನ್ನಡ ಉಪನ್ಯಾಸಕ ನೀಲಕಂಠ ಸ್ವಾಗತಿಸಿದರು.

Related posts

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya
error: Content is protected !!