25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

ಬೆಳ್ತಂಗಡಿ, ಜು.29: ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಹೆಣಗಳ ಕಳೆಬರ ಹೊರತೆಗೆಯುವ ಕಾರ್ಯಾಚರಣೆಗೆ ಎಸ್.ಐ.ಟಿ. ತಂಡದದಿಗೆ ವೈದ್ಯರ ತಂಡ ಜತೆಯಾಗಿದೆ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅಧಿಕಾರಿಗಳು ಮುಂಜಾನೆಯೇ ಹಾಜರಾಗಿದ್ದರು. ಈ ವೇಳೆ ಮಂಗಳೂರು ಕೆಎಂಸಿ ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಸಭೆ ನಡೆದು ಬಳಿಕ ಸೋಮವಾರ ಸಾಕ್ಷಿ ಗುರುತಿಸಿ ನೇತ್ರಾವತಿ ಸ್ನಾನ ಘಟ್ಟದಲ್ಲಿರುವ ಮೊದಲ ಸ್ಥಳದಲ್ಲಿ ಇರುವ ಮೃತದೇಹದ ಅವಶೇಷ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ನಡೆಸಲಾಗುತ್ತಿದೆ.ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ, ಎಸ್ಪಿ ಸೈಮನ್, ಪುತ್ತೂರು ವಿಭಾಗ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸಹಿತ ಕಂದಾಯ, ಅರಣ್ಯ, ಎಫ್.ಎಸ್.ಎಲ್.ನ ಸೋಕೋ ವಿಭಾಗ, ಎ.ಎನ್.ಎಫ್., ಆಂತರಿಕ ಭದ್ರತಾ ದಳ, ಪೊಲೀಸ್ ತಂಡದ ನೇತೃತ್ವದಲ್ಲಿ ಕಾರ್ಯಾಚರಣೆಗೆ ಅಣಿಯಾಗಿದ್ದಾರೆ.

Related posts

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!