23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ : ನಾಗರ ಪಂಚಮಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ರೋಗಿಗಳಿಗೆ ಉಚಿತವಾಗಿ ಹಾಲು , ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಬಗ್ಗೆ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್. ಎಂ ರವರು ದೇಶದಲ್ಲಿ 28 ಕೋಟಿ ಜನರು ಒಂದು ತೊಟ್ಟು ಹಾಲು ಖರೀದಿಸಲು ಸಾಧ್ಯವಿಲ್ಲದೆ ಜೀವಿಸುತ್ತಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಅಪೌಷ್ಟಿಕತೆಯ ಕೊರತೆಯಿಂದ ಮಕ್ಕಳು , ಮಹಿಳೆಯರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನಾವು ನಾಗರ ಪಂಚಮಿ ಹೆಸರಿನಲ್ಲಿ ಕಲ್ಲಿಗೆ , ಹುತ್ತಗಳಿಗೆ ಹಾಲು ಚೆಲ್ಲುವ ಮೂಲಕ ದುರುಪಯೋಗ ಮಾಡುತ್ತೇವೆ. ಅದರ ಬದಲಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ , ರೋಗಿಗಳಿಗೆ ನೀಡಿದರೆ ಉತ್ತಮ. ರೆಡ್ ಕ್ರಾಸ್ ಸೊಸೈಟಿ ಇಡೀ ಜಗತ್ತಿನಾದ್ಯಂತ ಅಪೌಷ್ಟಿಕತೆಯ ವಿರುದ್ಧ ಸಮರ ಸಾರಿದ್ದು , ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ರೋಗಿಗಳಿಗೆ ಹಾಲು , ಹಣ್ಣುಹಂಪಲು ವಿತರಣೆ ಮಾಡಲಾಯಿತು ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಕೆ , ಹಿರಿಯ ಸುಶ್ರುಕ್ರಿ ಪೊನ್ನಮ್ಮ , ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಯಶವಂತ ಪಟವರ್ಧನ್ , ಜೋನ್ ಅರ್ವಿನ್ ಡಿಸೋಜ , ನಿರ್ದೇಶಕಿ ನ್ಯಾಯವಾದಿ ಸುಕನ್ಯಾ ಹೆಚ್ , ಸದಸ್ಯ ಶೇಖರ್ ಲಾಯಿಲ , ಎಕೆಜಿ ಸೊಸೈಟಿ ಸಿಬ್ಬಂದಿಗಳಾದ ಸಂಜೀವ ಆರ್ , ಕು. ಕೀರ್ತನಾ ಉಪಸ್ಥಿತರಿದ್ದರು .

Related posts

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya
error: Content is protected !!