July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ : ನಾಗರ ಪಂಚಮಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ರೋಗಿಗಳಿಗೆ ಉಚಿತವಾಗಿ ಹಾಲು , ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಬಗ್ಗೆ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್. ಎಂ ರವರು ದೇಶದಲ್ಲಿ 28 ಕೋಟಿ ಜನರು ಒಂದು ತೊಟ್ಟು ಹಾಲು ಖರೀದಿಸಲು ಸಾಧ್ಯವಿಲ್ಲದೆ ಜೀವಿಸುತ್ತಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಅಪೌಷ್ಟಿಕತೆಯ ಕೊರತೆಯಿಂದ ಮಕ್ಕಳು , ಮಹಿಳೆಯರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನಾವು ನಾಗರ ಪಂಚಮಿ ಹೆಸರಿನಲ್ಲಿ ಕಲ್ಲಿಗೆ , ಹುತ್ತಗಳಿಗೆ ಹಾಲು ಚೆಲ್ಲುವ ಮೂಲಕ ದುರುಪಯೋಗ ಮಾಡುತ್ತೇವೆ. ಅದರ ಬದಲಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ , ರೋಗಿಗಳಿಗೆ ನೀಡಿದರೆ ಉತ್ತಮ. ರೆಡ್ ಕ್ರಾಸ್ ಸೊಸೈಟಿ ಇಡೀ ಜಗತ್ತಿನಾದ್ಯಂತ ಅಪೌಷ್ಟಿಕತೆಯ ವಿರುದ್ಧ ಸಮರ ಸಾರಿದ್ದು , ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ರೋಗಿಗಳಿಗೆ ಹಾಲು , ಹಣ್ಣುಹಂಪಲು ವಿತರಣೆ ಮಾಡಲಾಯಿತು ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಕೆ , ಹಿರಿಯ ಸುಶ್ರುಕ್ರಿ ಪೊನ್ನಮ್ಮ , ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಯಶವಂತ ಪಟವರ್ಧನ್ , ಜೋನ್ ಅರ್ವಿನ್ ಡಿಸೋಜ , ನಿರ್ದೇಶಕಿ ನ್ಯಾಯವಾದಿ ಸುಕನ್ಯಾ ಹೆಚ್ , ಸದಸ್ಯ ಶೇಖರ್ ಲಾಯಿಲ , ಎಕೆಜಿ ಸೊಸೈಟಿ ಸಿಬ್ಬಂದಿಗಳಾದ ಸಂಜೀವ ಆರ್ , ಕು. ಕೀರ್ತನಾ ಉಪಸ್ಥಿತರಿದ್ದರು .

Related posts

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!