23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

ಬೆಳ್ತಂಗಡಿ : ಕೂಟ ಮಹಾಜಗತ್ತು ಬೆಳ್ತಂಗಡಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟದ ಕಾರ್ಯಕ್ರಮ ಜು.27 ರಂದು ಉಜಿರೆಯ ಅರಿಪ್ಪಾಡಿ ಮಠದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಕೂಟ ಮಹಾಜಗತ್ತು ಬೆಳ್ತಂಗಡಿಯ ಅಂಗಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ ಹಾಗೂ ನೂತನ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗೀತಾ ವಿಶ್ವಾಸ ರಾವ್ ಉದ್ಘಾಟಿಸಿದರು. ವೇದಿಕೆಯಲ್ಲಿ ನಳಿನಿ ಹೊಳ್ಳ, ಪ್ರಕಾಶ್ ನಾರಾಯಣ ಚಾರ್ಮಾಡಿ, ಶರತ್ ಕುಮಾರ್ ಹಾಗೂ ಅಕ್ಷತಾ ಅಡೂರ್ ಉಪಸ್ಥಿತರಿದ್ದರು. ಆಟಿ ಮಾಸದ ವಿಶೇಷತೆ ಹಾಗೂ ಆಚರಣೆಯ ಕುರಿತು ವಾಸುದೇವ ಸೋಮಯಾಜಿ ಮಾಹಿತಿ ನೀಡಿದರು.

ವಿದ್ಯಾಶ್ರೀ ಅಡೂರ್ ಸ್ವಾಗತಿಸಿದರು. ಅಂಗಸಂಸ್ಥೆಯ ಮಹಿಳೆಯರಿಗೆ, ಪುರುಷರಿಗೆ, ಹಾಗೂ ಮಕ್ಕಳಿಗೆ ವಿವಿಧ ವಿನೋದಾವಳಿ ಆಟಗಳನ್ನು ಶ್ರೀಮತಿ ಆಶಾ ಅಡೂರ್ ನಿರ್ವಹಿಸಿದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಹಿಳಾ ವೇದಿಕೆಯ ನೂತನ ಕಾರ್ಯದರ್ಶಿ ಸಂತೋಷಿಣಿ ಕಾರಂತ್ ಕಾರ್ಯಕ್ರಮವನ್ನು ನಿರೂಪಿಸಿ, ಮೇಘನಾ ಪ್ರಶಾಂತ್ ಹೊಳ್ಳ ವಂದಿಸಿದರು. ಲಾವಣ್ಯ ಹೊಳ್ಳ ಹಾಗೂ ಮಾಲತಿ ರಾವ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಹಿಳೆಯರು ಮನೆಯಲ್ಲಿ ತಯಾರಿಸಿದ ವಿವಿಧ ಬಗೆಯ ಆಟಿಯ ವಿಶೇಷ ಖಾದ್ಯಗಳನ್ನು ತಂದು ಎಲ್ಲರಿಗೂ ಉಣಬಡಿಸಿದರು. ಖಾದ್ಯಗಳನ್ನು ತಯಾರಿಸಿದ ಮಹಿಳೆಯರಿಗೆ ಸಭೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕೂಟ ಮಹಾಜಗತ್ತು ಅಂಗಸಂಸ್ಥೆಯ ಸದಸ್ಯರು, ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya
error: Content is protected !!