25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಾ. ಜೋಸೆಫ್ ಎನ್ ಎಂ ಇವರು ಸಂಪನ್ಮೂಲ ವ್ಯಕ್ತಿಗಳಾಗಿದ್ದು ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದಲ್ಲಿ ಮೌಲ್ಯವರ್ಧನೆಯ ಬಗ್ಗೆ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರು ಪ್ರೊ. ಸುರೇಶ್ ವಿ ಅಧ್ಯಕ್ಷತೆಯನ್ನು ವಹಿಸಿದ್ದು ವಿದ್ಯಾರ್ಥಿಗಳಿಗೆ ಕಾಲೇಜಿನ ಎಲ್ಲಾ ನೀತಿ ನಿಯಮಗಳನ್ನು ವಿವರಿಸಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಪರಿಚಯಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ, ದೈಹಿಕ ಶಿಕ್ಷಣದ ಬಗ್ಗೆ, ಪ್ರೊ. ರಶ್ಮಿ, ಉದ್ಯೋಗ ಮಾಹಿತಿ ಕೋಶದ ಬಗ್ಗೆ, ಡಾ| ರವಿ ಎಂ ಎನ್ ಕಾಲೇಜಿನಲ್ಲಿ ಹೊಸದಾಗಿ ಪ್ರಾರಂಭಿಸಿದ AEDP(ಬಿಕಾಂ) ಪದವಿ ತರಗತಿಗಳ ಬಗ್ಗೆ, ಶ್ರೀಮತಿ ದಿವ್ಯ ರಾಜ್ ಕಚೇರಿ ವಿಷಯಗಳ ಬಗ್ಗೆ, ಮತ್ತು ಡಾ. ಕುಶಾಲಪ್ಪ IQAC ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಡಾ. ರಾಜೇಶ್ವರಿ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಹರ್ಷಿತ ಮತ್ತು ತಂಡದ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಪ್ರೊ. ನವೀನ್ ವಂದಿಸಿದರು ಮತ್ತು ಪ್ರೊ. ಮಾರುತಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!